38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ಡಿಕ್ಕಿ ಯಾಗಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಇತ್ತೀಚೆಗೆ ವರದಿಯಾಗಿದೆ.

ಬೆಳ್ತಂಗಡಿ ಉಮೇಶ್ ಗೌಡ (41 ವರ್ಷ), ರವರ ದೂರಿನಂತೆ ಜು.31 ರಂದು ಮಧ್ಯಾಹ್ನ, ಅವರ ದ್ವಿಚಕ್ರ ವಾಹನದಲ್ಲಿ ಅವರ ಹೆಂಡತಿ ವಿನೋದರವರನ್ನು ಸಹಸವಾರಳನ್ನಾಗಿ ಕುಳ್ಳಿರಿಸಿಕೊಂಡು, ಬೆಳ್ತಂಗಡಿಯಿಂದ ಬಂದಾರು ಕಡೆಗೆ ತೆರಳುತ್ತಾ, ಕೊಯ್ಯುರು ಗ್ರಾಮದ ಮಲೆಬೆಟ್ಟು ಎಂಬಲ್ಲಿಗೆ ತಲುಪುತ್ತಿದ್ದಂತೆ, ಉಮೇಶ್ ಗೌಡರವರು ಮುಂದಿನಿಂದ ಹೋಗುತ್ತಿದ್ದ ಆಟೋರಿಕ್ಷಾವನ್ನು ಅದರ ಚಾಲಕ ಸೋಮಶೇಖರ್ ರವರು, ದುಡುಕುತನದಿಂದ ಚಲಾಯಿಸಿ ಆಟೋರಿಕ್ಷಾ ಉಮೇಶ್ ಗೌಡ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿರುತ್ತದೆ.

ಪರಿಣಾಮ ದ್ವಿಚಕ್ರ ಸವಾರರು ವಾಹನ ಸಮೇತ ಇಬ್ಬರು ರಸ್ತೆಗೆ ಬಿದ್ದು ಉಮೇಶ್ ಗೌಡರವರು ಗಾಯಗೊಂಡಿದ್ದು, ಅವರ ಹೆಂಡತಿಗೆ ಯಾವುದೇ ರೀತಿಯ ಗಾಯಗಳಾಗಿರುವುದಿಲ್ಲ. ಉಮೇಶ್ ಗೌಡ ಉಜಿರೆಯ ಎಸ್ ಡಿ ಎಮ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದವರು, ನಂತರ ಗಾಯ ಉಲ್ಬಣಗೊಂಡು ಗುರುವಾಯನಕೆರೆಯ ಅಭಯ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 82/2024 ಕಲಂ: 281, 125(a), BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಲಾಯಿಲ: ಬ್ಯೂಟೀಷಿಯನ್ ಮತ್ತು ಎಂಬ್ರಾಯಿಡರಿ ತರಬೇತಿ ಸಮಾರೋಪ

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

Suddi Udaya

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya
error: Content is protected !!