September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ಡಿಕ್ಕಿ ಯಾಗಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಇತ್ತೀಚೆಗೆ ವರದಿಯಾಗಿದೆ.

ಬೆಳ್ತಂಗಡಿ ಉಮೇಶ್ ಗೌಡ (41 ವರ್ಷ), ರವರ ದೂರಿನಂತೆ ಜು.31 ರಂದು ಮಧ್ಯಾಹ್ನ, ಅವರ ದ್ವಿಚಕ್ರ ವಾಹನದಲ್ಲಿ ಅವರ ಹೆಂಡತಿ ವಿನೋದರವರನ್ನು ಸಹಸವಾರಳನ್ನಾಗಿ ಕುಳ್ಳಿರಿಸಿಕೊಂಡು, ಬೆಳ್ತಂಗಡಿಯಿಂದ ಬಂದಾರು ಕಡೆಗೆ ತೆರಳುತ್ತಾ, ಕೊಯ್ಯುರು ಗ್ರಾಮದ ಮಲೆಬೆಟ್ಟು ಎಂಬಲ್ಲಿಗೆ ತಲುಪುತ್ತಿದ್ದಂತೆ, ಉಮೇಶ್ ಗೌಡರವರು ಮುಂದಿನಿಂದ ಹೋಗುತ್ತಿದ್ದ ಆಟೋರಿಕ್ಷಾವನ್ನು ಅದರ ಚಾಲಕ ಸೋಮಶೇಖರ್ ರವರು, ದುಡುಕುತನದಿಂದ ಚಲಾಯಿಸಿ ಆಟೋರಿಕ್ಷಾ ಉಮೇಶ್ ಗೌಡ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿರುತ್ತದೆ.

ಪರಿಣಾಮ ದ್ವಿಚಕ್ರ ಸವಾರರು ವಾಹನ ಸಮೇತ ಇಬ್ಬರು ರಸ್ತೆಗೆ ಬಿದ್ದು ಉಮೇಶ್ ಗೌಡರವರು ಗಾಯಗೊಂಡಿದ್ದು, ಅವರ ಹೆಂಡತಿಗೆ ಯಾವುದೇ ರೀತಿಯ ಗಾಯಗಳಾಗಿರುವುದಿಲ್ಲ. ಉಮೇಶ್ ಗೌಡ ಉಜಿರೆಯ ಎಸ್ ಡಿ ಎಮ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದವರು, ನಂತರ ಗಾಯ ಉಲ್ಬಣಗೊಂಡು ಗುರುವಾಯನಕೆರೆಯ ಅಭಯ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 82/2024 ಕಲಂ: 281, 125(a), BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪುಂಜಾಲಕಟ್ಟೆ: ಬಿ.ಸಿ.ಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸ್ವಾತಂತ್ರ ದಿನಾಚರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!