25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ಡಿಕ್ಕಿ ಯಾಗಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಇತ್ತೀಚೆಗೆ ವರದಿಯಾಗಿದೆ.

ಬೆಳ್ತಂಗಡಿ ಉಮೇಶ್ ಗೌಡ (41 ವರ್ಷ), ರವರ ದೂರಿನಂತೆ ಜು.31 ರಂದು ಮಧ್ಯಾಹ್ನ, ಅವರ ದ್ವಿಚಕ್ರ ವಾಹನದಲ್ಲಿ ಅವರ ಹೆಂಡತಿ ವಿನೋದರವರನ್ನು ಸಹಸವಾರಳನ್ನಾಗಿ ಕುಳ್ಳಿರಿಸಿಕೊಂಡು, ಬೆಳ್ತಂಗಡಿಯಿಂದ ಬಂದಾರು ಕಡೆಗೆ ತೆರಳುತ್ತಾ, ಕೊಯ್ಯುರು ಗ್ರಾಮದ ಮಲೆಬೆಟ್ಟು ಎಂಬಲ್ಲಿಗೆ ತಲುಪುತ್ತಿದ್ದಂತೆ, ಉಮೇಶ್ ಗೌಡರವರು ಮುಂದಿನಿಂದ ಹೋಗುತ್ತಿದ್ದ ಆಟೋರಿಕ್ಷಾವನ್ನು ಅದರ ಚಾಲಕ ಸೋಮಶೇಖರ್ ರವರು, ದುಡುಕುತನದಿಂದ ಚಲಾಯಿಸಿ ಆಟೋರಿಕ್ಷಾ ಉಮೇಶ್ ಗೌಡ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿರುತ್ತದೆ.

ಪರಿಣಾಮ ದ್ವಿಚಕ್ರ ಸವಾರರು ವಾಹನ ಸಮೇತ ಇಬ್ಬರು ರಸ್ತೆಗೆ ಬಿದ್ದು ಉಮೇಶ್ ಗೌಡರವರು ಗಾಯಗೊಂಡಿದ್ದು, ಅವರ ಹೆಂಡತಿಗೆ ಯಾವುದೇ ರೀತಿಯ ಗಾಯಗಳಾಗಿರುವುದಿಲ್ಲ. ಉಮೇಶ್ ಗೌಡ ಉಜಿರೆಯ ಎಸ್ ಡಿ ಎಮ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದವರು, ನಂತರ ಗಾಯ ಉಲ್ಬಣಗೊಂಡು ಗುರುವಾಯನಕೆರೆಯ ಅಭಯ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 82/2024 ಕಲಂ: 281, 125(a), BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ನಾರಾವಿ ಚರ್ಚ್‌ ರೋಡ್‌ ಬಳಿ ಕಾರು ಡಿಕ್ಕಿ : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ಮೃತ್ಯು

Suddi Udaya

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya
error: Content is protected !!