22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ ಸಂಭವಿಸಿದ್ದು ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಹಾಗೂ ಸಮರೋಪಾದಿಯಲ್ಲಿ ಕೈಗೊಳ್ಳುವುದರ ಜೊತೆಗೆ ಕೂಡಲೇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ ಸಂಭವಿಸಿದ್ದು ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಹಾಗೂ ಸಮರೋಪಾದಿಯಲ್ಲಿ ಕೈಗೊಳ್ಳುವುದರ ಜೊತೆಗೆ ಕೂಡಲೇ ಸೂಕ್ತ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ, ಕಂದಾಯ ಸಚಿವರಾದ ಕೃಷ್ಣೇಬೈರೇಗೌಡ, ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಇತಿಹಾಸ ಕಂಡರಿಯದ ದೊಡ್ಡ ಮಟ್ಟದ ಪ್ರವಾಹ ಉಂಟಾಗಿ, ಇಡೀ ಜಿಲ್ಲೆಯ ಜನಜೀವನವೇ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದ್ದು ಊಹಿಸಲೂ ಸಾಧ್ಯವಾಗದ ರೀತಿಯಲ್ಲಿ ಅತ್ಯಂತ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಬೇಕಾಗಿ ಬಂದಿದೆ.


ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ದೊಡ್ಡ ಪ್ರಮಾಣದ ಗುಡ್ಡ ಕುಸಿತ ಹಾಗೂ ಭೂಕುಸಿತ ಸಂಭವಿಸಿ, ಬಹುತೇಕ ಕಡೆ ರಸ್ತೆ ಸಂಪರ್ಕಗಳು ಸಂಪೂರ್ಣವಾಗಿ ಕಡಿತಗೊಂಡಿವೆ. ಜಿಲ್ಲೆಯಲ್ಲಿನ ಬಹುತೇಕ ಹೆದ್ದಾರಿಗಳು ನದಿಯಂತಾಗಿದ್ದು, ಇಡೀ ಜಿಲ್ಲೆಯಲ್ಲಿ ಭೂಮಾರ್ಗ ಸಂಚಾರವೇ ಅಪಾಯಕ್ಕೆ ಸಿಲುಕಿದೆ. ಹಲವಾರು ಮನೆಗಳು ಕುಸಿತದಿಂದ ಹಾನಿಗೊಂಡಿದ್ದು, ಸಾವಿರಾರು ಜನರು ನಿರ್ವಸಿತರಾಗಿದ್ದಾರೆ. ಅನೇಕ ಕಡೆಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಹಲವಾರು ಗ್ರಾಮಗಳು ಮುಳುಗಡೆಯಾಗಿದ್ದು ಸಂಕಷ್ಟಕ್ಕೆ ಒಳಗಾಗಿರುವ ಕುಟುಂಬಗಳನ್ನು ಸ್ಥಳಾಂತರ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಘಾಟಿ ಪರಿಸರದಲ್ಲಿ ಸಾಕಷ್ಟು ಅಪಾಯದ ಪರಿಸ್ಥಿತಿ ಇದ್ದು, ಘಾಟಿ ಪ್ರದೇಶದಲ್ಲಿ ಪ್ರಯಾಣಿಕರ ಪರದಾಟ ಹೇಳತೀರದು. ಜಿಲ್ಲೆಯಾದ್ಯಂತ ಹಲವಾರು ತೋಟಗಳು ಜಲಾವೃತಗೊಂಡಿದ್ದು ತೋಟಗಾರಿಕೆ ಹಾಗೂ ಇತರೇ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಇಡೀ ರೈತ ಸಮೂಹವೇ ಅತ್ಯಂತ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದೆ.

ಜಿಲ್ಲೆಯಲ್ಲಿ ಇಂದೆಂದೂ ಸಂಭವಿಸಿದ ಮಟ್ಟದಲ್ಲಿ ತೀವು ತರದ ಹಾನಿಯಾಗಿದ್ದು, ತತಕ್ಷಣವೇ ಸಂಕಷ್ಟಕ್ಕೀಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಪರಿಣಾಮಕಾರಿಯಾಗಿ ಹಾಗೂ ಸಮರೋಪಾದಿಯಲ್ಲಿ ಕೈಗೊಳ್ಳುವುದರ ಜೊತೆಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕಾಗಿ ಅವರು ಮನವಿ ಮೂಲಕ ಒತ್ತಾಯಿಸಿದರು.

Related posts

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya
error: Content is protected !!