April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

ಬೆಳ್ತಂಗಡಿ : ಆ.1ರಂದು ಸುರಿದು ಭಾರೀ ಮಳೆಗೆ ಕಳಿಯ ಗ್ರಾಮ ಖುಷಿದ ಮುಡಾಯಿಪಲ್ಕೆ ಅಣ್ಣು ಎಂಬವರ ಮನೆಯ ಒಂದು ಭಾಗ ಕುಸಿತವಾಗಿ ಅವರ ತಲೆಗೆ ಗಂಭೀರ ಗಾಯವಾಗಿದೆ.

ಮಧ್ಯಾಹ್ನ ಈ ಘಟನೆ ನಡೆದಿದ್ದು ಅಣ್ಣು ಅವರು ಊಟ ಮುಗಿಸಿ ಮಲಗಿದ್ದರು. ಆಗ ಈ ಘಟನೆ ನಡೆದಿದೆ. ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ನಿರ್ದೇಶಕ ನೇವಿಲ್ ಸ್ಟೀವನ್ ಮೊರಾಸ್ ಅವರು ಘಟನೆ ಯನ್ನು ಕಳಿಯ ಗ್ರಾಮಾಧಿಕಾರಿ ಪ್ರಥ್ವಿ ಶೆಟ್ಟಿ ಅವರಿಗೆ ವಿಷಯ ತಿಳಿಸಿದ್ದು, ತಕ್ಷಣ ಗಾಯಗೊಂಡ ಅಣ್ಣು ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್,ಉಪಾಧ್ಯಕ್ಷೆ ಇಂದಿರಾ ಬಿ.ಶೆಟ್ಟಿ, ಸದಸ್ಯರಾದ ಮೋಹಿನಿ,ವಿಜಯ ಕುಮಾರ್ ಕೆ, ಮರೀಟಾ ಪಿಂಟೋ,ಪುಷ್ಪಲತಾ, ಶ್ವೇತಾ, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ ಹಾಗೂ ಕಾರ್ಯದರ್ಶಿ ಕುಂಞ್ಞ ಕೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya
error: Content is protected !!