25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ವೈಚಾರಿಕ ಹಾಗೂ ವೈಜ್ಞಾನಿಕ ವಿಚಾರಗಳನ್ನು ಒಳಗೊಂಡ ತುಳುನಾಡಿನ ಆಚರಣೆಗಳು ಬಹು ವೈಶಿಷ್ಟ್ಯತೆಯಿಂದ ಕೂಡಿದೆ ಎಂದು ವಾಣಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಮೀನಾಕ್ಷಿ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ಜರಗಿದ ಆಟಿ ಒಂಜಿ ನೆಂಪು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ತುಳು ನಾಡಿನ ಜನರು ಪ್ರಕೃತಿಗೆ ಪೂರಕವಾಗಿ ನಡೆದುಕೊಂಡಿದ್ದು ವರ್ಷದ ಎಲ್ಲಾ ಕಾಲದಲ್ಲೂ ಬದುಕುವ ಕಲೆಯನ್ನು ರೂಡಿಸಿಕೊಂಡಿದ್ದರು. ಆಷಾಢ ತಿಂಗಳಲ್ಲಿ ಆಹಾರದ ಕೊರತೆಯಾದಾಗ ಪರಿಸರದಲ್ಲಿ ದೊರೆಯುವ ಸೊಪ್ಪು, ಗೆಡ್ಡೆ , ಗೆಣಸುಗಳನ್ನು ತಿಂದು ಜೀವಿಸುವುದರೊಂದಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡಿದ್ದರು. ಇದರಿಂದ ವರ್ಷವಿಡಿ ರೋಗ ಮುಕ್ತರಾಗಿರಲು ಸಾಧ್ಯವಾಗಿತ್ತು. ಇಂದಿನ ಕಾಲದ ಜನರು ತುಳುನಾಡಿನ ಆಚರಣೆಗಳ ಮಹತ್ವವನ್ನು ತಿಳಿದುಕೊಂಡು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು ಎಂದರು.


ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ ಚೆನ್ನೆಮಣೆ ಆಟ ಆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಇವತ್ತಿನ ಜನರು ಪ್ರಕೃತಿದತ್ತ ಆಹಾರದ ಬದಲು ಹೆಚ್ಚಾಗಿ ರೆಸ್ಟೋರೆಂಟ್ ಆಹಾರವನ್ನು ತಿನ್ನುತ್ತಾರೆ. ಹಾಗಾಗಿ ಬೇರೆ ಬೇರೆ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಕಷ್ಟಪಟ್ಟು ದುಡಿದು ಉತ್ತಮವಾದ ಆಹಾರವನ್ನು ತಿಂದಾಗ ಮಾತ್ರ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಸಾಧ್ಯ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು.
‌‌ ತುಳು ಸಂಘದ ಸಂಯೋಜಕರಾದ ಮಹಾಬಲ ಗೌಡ ಸ್ವಾಗತಿಸಿದರು. ಉಪನ್ಯಾಸಕ ಬೆಳ್ಳಿಯಪ್ಪ. ಕೆ ವಂದಿಸಿದರು. ಕುಮಾರಿ ಅನುಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya
error: Content is protected !!