25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

ಬೆಳ್ತಂಗಡಿ; ಖಾಝಿ ಕೂರತ್‌ ತಂಙಳ್ ಅಕಾಲಿಕ ನಿಧನದಿಂದ ತೆರವಾಗಿರುವ ಖಾಝಿ ಸ್ಥಾನಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಖಮರುಲ್ ಉಲಮಾ ಕಾಂತಪುರಂ ಶೈಖ್ ಅಬೂಬಕ್ಕರ್ ಅಹಮದ್ (ಎ.ಪಿ ಉಸ್ತಾದ್) ಅವರನ್ನು ಖಾಝಿಯಾಗಿ ಸ್ವೀಕರಿಸುವ ಐತಿಹಾಸಿಕ ಸಮಾರಂಭದ ಬಗ್ಗೆ ಆ.2 ರಂದು ಬೆಳ್ತಂಗಡಿಯಲ್ಲಿ ಸಮುದಾಯ ಮುಖಂಡರ ಸಮಾಲೋಚನಾ ಸಭೆ ನಡೆಯಿತು.

ಖಾಝಿ ಬೈಅತ್ ಬಳಿಕ ಅವರ ಪರಮಾಧಿಕಾರದಂತೆ ಅವರಿಗೆ ಸಹಾಯಕರಾಗಿ ನೇಮಿಸುವ ವೇಳೆ ಸಯ್ಯಿದ್ ಕಾಜೂರು ತಂಙಳ್ ಅವರನ್ನು ಪರಿಗಣಿಸುವಂತೆ ಸೇರಿದ್ದ ಮುಖಂಡರು ಒಕ್ಕೊರಲ ಆಗ್ರಹ ವ್ಯಕ್ತಪಡಿಸಿದರು. ಈ ಬಗ್ಗೆ ಸಂಯುಕ್ತ ಜಮಾಅತ್ ಅಧ್ಯಕ್ಷರನ್ನು ಭೇಟಿ ಮಾಡುವುದು ಹಾಗೂ ಎ.ಪಿ ಉಸ್ತಾದ್ ಅವರನ್ನು ಭೇಟಿ ಮಾಡಲು ನಿಯೋಗ ರಚಿಸಲಾಯಿತು.
ಕಳೆದ ಇಷ್ಟೂ ವರ್ಷಗಳಲ್ಲಿ ಬೆಳ್ತಂಗಡಿ ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿಯಾಗಿ ಸೇವೆ ಸಲ್ಲಿಸಿದ ಸಾದಾತ್ ತಂಙಳ್ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಸಭೆಯ ನಿರ್ಣಯದಂತೆ ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಅವರನ್ನು ನಿಯೋಗ ಭೇಟಿ ಮಾಡಿ ಸಭೆಯ ಇಂಗಿತವನ್ನು ಹಾಗೂ ಬೇಡಿಕೆಗಳನ್ನು ಮುಂದಿಡಲಾಯಿತು.


ಸಭೆಯಲ್ಲಿ ಹಲವು ಮೊಹಲ್ಲಾಗಳ ಪ್ರಮುಖರು, ಸಂಯುಕ್ತ ಜಮಾಅತ್ ಪ್ರಮುಖರು ಹಾಗೂ ಸಮುದಾಯ ನಾಯಕರುಗಳು ಭಾಗವಹಿಸಿದ್ದರು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya
error: Content is protected !!