38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

ಬೆಳ್ತಂಗಡಿ; ಖಾಝಿ ಕೂರತ್‌ ತಂಙಳ್ ಅಕಾಲಿಕ ನಿಧನದಿಂದ ತೆರವಾಗಿರುವ ಖಾಝಿ ಸ್ಥಾನಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಖಮರುಲ್ ಉಲಮಾ ಕಾಂತಪುರಂ ಶೈಖ್ ಅಬೂಬಕ್ಕರ್ ಅಹಮದ್ (ಎ.ಪಿ ಉಸ್ತಾದ್) ಅವರನ್ನು ಖಾಝಿಯಾಗಿ ಸ್ವೀಕರಿಸುವ ಐತಿಹಾಸಿಕ ಸಮಾರಂಭದ ಬಗ್ಗೆ ಆ.2 ರಂದು ಬೆಳ್ತಂಗಡಿಯಲ್ಲಿ ಸಮುದಾಯ ಮುಖಂಡರ ಸಮಾಲೋಚನಾ ಸಭೆ ನಡೆಯಿತು.

ಖಾಝಿ ಬೈಅತ್ ಬಳಿಕ ಅವರ ಪರಮಾಧಿಕಾರದಂತೆ ಅವರಿಗೆ ಸಹಾಯಕರಾಗಿ ನೇಮಿಸುವ ವೇಳೆ ಸಯ್ಯಿದ್ ಕಾಜೂರು ತಂಙಳ್ ಅವರನ್ನು ಪರಿಗಣಿಸುವಂತೆ ಸೇರಿದ್ದ ಮುಖಂಡರು ಒಕ್ಕೊರಲ ಆಗ್ರಹ ವ್ಯಕ್ತಪಡಿಸಿದರು. ಈ ಬಗ್ಗೆ ಸಂಯುಕ್ತ ಜಮಾಅತ್ ಅಧ್ಯಕ್ಷರನ್ನು ಭೇಟಿ ಮಾಡುವುದು ಹಾಗೂ ಎ.ಪಿ ಉಸ್ತಾದ್ ಅವರನ್ನು ಭೇಟಿ ಮಾಡಲು ನಿಯೋಗ ರಚಿಸಲಾಯಿತು.
ಕಳೆದ ಇಷ್ಟೂ ವರ್ಷಗಳಲ್ಲಿ ಬೆಳ್ತಂಗಡಿ ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿಯಾಗಿ ಸೇವೆ ಸಲ್ಲಿಸಿದ ಸಾದಾತ್ ತಂಙಳ್ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಸಭೆಯ ನಿರ್ಣಯದಂತೆ ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಅವರನ್ನು ನಿಯೋಗ ಭೇಟಿ ಮಾಡಿ ಸಭೆಯ ಇಂಗಿತವನ್ನು ಹಾಗೂ ಬೇಡಿಕೆಗಳನ್ನು ಮುಂದಿಡಲಾಯಿತು.


ಸಭೆಯಲ್ಲಿ ಹಲವು ಮೊಹಲ್ಲಾಗಳ ಪ್ರಮುಖರು, ಸಂಯುಕ್ತ ಜಮಾಅತ್ ಪ್ರಮುಖರು ಹಾಗೂ ಸಮುದಾಯ ನಾಯಕರುಗಳು ಭಾಗವಹಿಸಿದ್ದರು.

Related posts

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಧರ್ಮಸ್ಥಳ ಗ್ರಾ. ಪಂ. ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!