22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

ಬೆಳ್ತಂಗಡಿ; ಖಾಝಿ ಕೂರತ್‌ ತಂಙಳ್ ಅಕಾಲಿಕ ನಿಧನದಿಂದ ತೆರವಾಗಿರುವ ಖಾಝಿ ಸ್ಥಾನಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಖಮರುಲ್ ಉಲಮಾ ಕಾಂತಪುರಂ ಶೈಖ್ ಅಬೂಬಕ್ಕರ್ ಅಹಮದ್ (ಎ.ಪಿ ಉಸ್ತಾದ್) ಅವರನ್ನು ಖಾಝಿಯಾಗಿ ಸ್ವೀಕರಿಸುವ ಐತಿಹಾಸಿಕ ಸಮಾರಂಭದ ಬಗ್ಗೆ ಆ.2 ರಂದು ಬೆಳ್ತಂಗಡಿಯಲ್ಲಿ ಸಮುದಾಯ ಮುಖಂಡರ ಸಮಾಲೋಚನಾ ಸಭೆ ನಡೆಯಿತು.

ಖಾಝಿ ಬೈಅತ್ ಬಳಿಕ ಅವರ ಪರಮಾಧಿಕಾರದಂತೆ ಅವರಿಗೆ ಸಹಾಯಕರಾಗಿ ನೇಮಿಸುವ ವೇಳೆ ಸಯ್ಯಿದ್ ಕಾಜೂರು ತಂಙಳ್ ಅವರನ್ನು ಪರಿಗಣಿಸುವಂತೆ ಸೇರಿದ್ದ ಮುಖಂಡರು ಒಕ್ಕೊರಲ ಆಗ್ರಹ ವ್ಯಕ್ತಪಡಿಸಿದರು. ಈ ಬಗ್ಗೆ ಸಂಯುಕ್ತ ಜಮಾಅತ್ ಅಧ್ಯಕ್ಷರನ್ನು ಭೇಟಿ ಮಾಡುವುದು ಹಾಗೂ ಎ.ಪಿ ಉಸ್ತಾದ್ ಅವರನ್ನು ಭೇಟಿ ಮಾಡಲು ನಿಯೋಗ ರಚಿಸಲಾಯಿತು.
ಕಳೆದ ಇಷ್ಟೂ ವರ್ಷಗಳಲ್ಲಿ ಬೆಳ್ತಂಗಡಿ ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿಯಾಗಿ ಸೇವೆ ಸಲ್ಲಿಸಿದ ಸಾದಾತ್ ತಂಙಳ್ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಸಭೆಯ ನಿರ್ಣಯದಂತೆ ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಅವರನ್ನು ನಿಯೋಗ ಭೇಟಿ ಮಾಡಿ ಸಭೆಯ ಇಂಗಿತವನ್ನು ಹಾಗೂ ಬೇಡಿಕೆಗಳನ್ನು ಮುಂದಿಡಲಾಯಿತು.


ಸಭೆಯಲ್ಲಿ ಹಲವು ಮೊಹಲ್ಲಾಗಳ ಪ್ರಮುಖರು, ಸಂಯುಕ್ತ ಜಮಾಅತ್ ಪ್ರಮುಖರು ಹಾಗೂ ಸಮುದಾಯ ನಾಯಕರುಗಳು ಭಾಗವಹಿಸಿದ್ದರು.

Related posts

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya
error: Content is protected !!