25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

ಬೆಳ್ತಂಗಡಿ; ಖಾಝಿ ಕೂರತ್‌ ತಂಙಳ್ ಅಕಾಲಿಕ ನಿಧನದಿಂದ ತೆರವಾಗಿರುವ ಖಾಝಿ ಸ್ಥಾನಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಖಮರುಲ್ ಉಲಮಾ ಕಾಂತಪುರಂ ಶೈಖ್ ಅಬೂಬಕ್ಕರ್ ಅಹಮದ್ (ಎ.ಪಿ ಉಸ್ತಾದ್) ಅವರನ್ನು ಖಾಝಿಯಾಗಿ ಸ್ವೀಕರಿಸುವ ಐತಿಹಾಸಿಕ ಸಮಾರಂಭದ ಬಗ್ಗೆ ಆ.2 ರಂದು ಬೆಳ್ತಂಗಡಿಯಲ್ಲಿ ಸಮುದಾಯ ಮುಖಂಡರ ಸಮಾಲೋಚನಾ ಸಭೆ ನಡೆಯಿತು.

ಖಾಝಿ ಬೈಅತ್ ಬಳಿಕ ಅವರ ಪರಮಾಧಿಕಾರದಂತೆ ಅವರಿಗೆ ಸಹಾಯಕರಾಗಿ ನೇಮಿಸುವ ವೇಳೆ ಸಯ್ಯಿದ್ ಕಾಜೂರು ತಂಙಳ್ ಅವರನ್ನು ಪರಿಗಣಿಸುವಂತೆ ಸೇರಿದ್ದ ಮುಖಂಡರು ಒಕ್ಕೊರಲ ಆಗ್ರಹ ವ್ಯಕ್ತಪಡಿಸಿದರು. ಈ ಬಗ್ಗೆ ಸಂಯುಕ್ತ ಜಮಾಅತ್ ಅಧ್ಯಕ್ಷರನ್ನು ಭೇಟಿ ಮಾಡುವುದು ಹಾಗೂ ಎ.ಪಿ ಉಸ್ತಾದ್ ಅವರನ್ನು ಭೇಟಿ ಮಾಡಲು ನಿಯೋಗ ರಚಿಸಲಾಯಿತು.
ಕಳೆದ ಇಷ್ಟೂ ವರ್ಷಗಳಲ್ಲಿ ಬೆಳ್ತಂಗಡಿ ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿಯಾಗಿ ಸೇವೆ ಸಲ್ಲಿಸಿದ ಸಾದಾತ್ ತಂಙಳ್ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಸಭೆಯ ನಿರ್ಣಯದಂತೆ ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಅವರನ್ನು ನಿಯೋಗ ಭೇಟಿ ಮಾಡಿ ಸಭೆಯ ಇಂಗಿತವನ್ನು ಹಾಗೂ ಬೇಡಿಕೆಗಳನ್ನು ಮುಂದಿಡಲಾಯಿತು.


ಸಭೆಯಲ್ಲಿ ಹಲವು ಮೊಹಲ್ಲಾಗಳ ಪ್ರಮುಖರು, ಸಂಯುಕ್ತ ಜಮಾಅತ್ ಪ್ರಮುಖರು ಹಾಗೂ ಸಮುದಾಯ ನಾಯಕರುಗಳು ಭಾಗವಹಿಸಿದ್ದರು.

Related posts

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ಶಿಬಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ವಿನೂತನ ಯೋಜನೆ: ಕ್ಷೇತ್ರದಿಂದ ಹೊರಗಿದ್ದರೂ ಪ್ರತಿದಿನದ ಪೂಜೆಯನ್ನು ಯೂಟ್ಯೂಬ್ ಮೂಲಕ ನೇರವಾಗಿ ನೋಡುವ ಅವಕಾಶ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!