September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

ಬೆಳ್ತಂಗಡಿ; ಖಾಝಿ ಕೂರತ್‌ ತಂಙಳ್ ಅಕಾಲಿಕ ನಿಧನದಿಂದ ತೆರವಾಗಿರುವ ಖಾಝಿ ಸ್ಥಾನಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಖಮರುಲ್ ಉಲಮಾ ಕಾಂತಪುರಂ ಶೈಖ್ ಅಬೂಬಕ್ಕರ್ ಅಹಮದ್ (ಎ.ಪಿ ಉಸ್ತಾದ್) ಅವರನ್ನು ಖಾಝಿಯಾಗಿ ಸ್ವೀಕರಿಸುವ ಐತಿಹಾಸಿಕ ಸಮಾರಂಭದ ಬಗ್ಗೆ ಆ.2 ರಂದು ಬೆಳ್ತಂಗಡಿಯಲ್ಲಿ ಸಮುದಾಯ ಮುಖಂಡರ ಸಮಾಲೋಚನಾ ಸಭೆ ನಡೆಯಿತು.

ಖಾಝಿ ಬೈಅತ್ ಬಳಿಕ ಅವರ ಪರಮಾಧಿಕಾರದಂತೆ ಅವರಿಗೆ ಸಹಾಯಕರಾಗಿ ನೇಮಿಸುವ ವೇಳೆ ಸಯ್ಯಿದ್ ಕಾಜೂರು ತಂಙಳ್ ಅವರನ್ನು ಪರಿಗಣಿಸುವಂತೆ ಸೇರಿದ್ದ ಮುಖಂಡರು ಒಕ್ಕೊರಲ ಆಗ್ರಹ ವ್ಯಕ್ತಪಡಿಸಿದರು. ಈ ಬಗ್ಗೆ ಸಂಯುಕ್ತ ಜಮಾಅತ್ ಅಧ್ಯಕ್ಷರನ್ನು ಭೇಟಿ ಮಾಡುವುದು ಹಾಗೂ ಎ.ಪಿ ಉಸ್ತಾದ್ ಅವರನ್ನು ಭೇಟಿ ಮಾಡಲು ನಿಯೋಗ ರಚಿಸಲಾಯಿತು.
ಕಳೆದ ಇಷ್ಟೂ ವರ್ಷಗಳಲ್ಲಿ ಬೆಳ್ತಂಗಡಿ ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿಯಾಗಿ ಸೇವೆ ಸಲ್ಲಿಸಿದ ಸಾದಾತ್ ತಂಙಳ್ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಸಭೆಯ ನಿರ್ಣಯದಂತೆ ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಅವರನ್ನು ನಿಯೋಗ ಭೇಟಿ ಮಾಡಿ ಸಭೆಯ ಇಂಗಿತವನ್ನು ಹಾಗೂ ಬೇಡಿಕೆಗಳನ್ನು ಮುಂದಿಡಲಾಯಿತು.


ಸಭೆಯಲ್ಲಿ ಹಲವು ಮೊಹಲ್ಲಾಗಳ ಪ್ರಮುಖರು, ಸಂಯುಕ್ತ ಜಮಾಅತ್ ಪ್ರಮುಖರು ಹಾಗೂ ಸಮುದಾಯ ನಾಯಕರುಗಳು ಭಾಗವಹಿಸಿದ್ದರು.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರಕಾರ ಆದೇಶ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ

Suddi Udaya

ಲಾಯಿಲ: ಹರೀಶ್ ಪೂಂಜ ಅಭಿನಂದನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ ಕಾರ್ಯಕ್ರಮ ‘ಪ್ರಣಾಮಂ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ: ದ್ವಿತೀಯ ಪಿಯುಸಿ ಮರು ಪರೀಕ್ಷೆ ಫಲಿತಾಂಶ ಪ್ರಕಟ

Suddi Udaya
error: Content is protected !!