28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

ಕೊಯ್ಯೂರು : ಉತ್ಸಾಹಿ ಸ್ವಯಂ ಸೇವಕ ತಂಡ ಆದೂರ್ ಪೆರಾಲ್ ಕೊಯ್ಯೂರು ಇದರ ಸದಸ್ಯರಿಂದ ಶ್ರಮದಾನದ ಮೂಲಕ ಭೂಕುಸಿತ ಸಂಭವಿಸಿ ತೋಡಿಗೆ ಬಿದ್ದಿರುವ ಮಣ್ಣು ಮತ್ತು ಇನ್ನಿತರ ವಸ್ತುಗಳ ತೆರವುಗೊಳಿಸುವ ಕಾರ್ಯಕ್ರಮ ನಡೆಯಿತು.


ಕೊಯ್ಯೂರು ನಾಗನೋಡಿ ಹೇಮಂತ ಗೌಡರ ಮನೆಯ ಹಿಂಭಾಗದಲ್ಲಿ ವಿಪರೀತ ಮಳೆಯಿಂದ ಭೂಕುಸಿತ ಉಂಟಾಗಿ ಮಣ್ಣು ಹಾಗೂ ಮರಗಳು ನೀರು ಹರಿಯುವ ತೋಡಿಗೆ ಬಿದ್ದು ತುಂಬಾ ಸಮಸ್ಯೆಯಗಿತ್ತು. ಈ ಸಮಸ್ಯೆಯನ್ನು ಶ್ರೀ ಕೃಷ್ಣ ಭಜನಾ ಮಂಡಳಿ ಆದೂರ್ ಪೆರಾಲ್, ಕೊಯ್ಯೂರು ಇದರ ಸಹಕಾರದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಉತ್ಸಾಹಿ ಸ್ವಯಂ ಸೇವಕರ ತಂಡದ ಸದಸ್ಯರು ಒಟ್ಟಾಗಿ ಸೇರಿ ಇಂದು ಸತತ 7 ಗಂಟೆಗಳ ಕಾಲ ಶ್ರಮದಾನದ ಮೂಲಕ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸಿ ನೀರು ಸುಗಮವಾಗಿ ಹರಿಯುವಂತೆ ಮಾಡಿ ಮುಂದಕ್ಕೆ ಆಗಬಹುದಾದ ಹೆಚ್ಚಿನ ಅಪಾಯವನ್ನು ಸಾಧ್ಯವಾದಷ್ಟು ಮಟ್ಟಿಗೆ ತಡೆಗಟ್ಟುವಲ್ಲಿ ಯಶಸ್ವಿಯಾದರು.

Related posts

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಎಂ. ಗಂಗಾಧರ ಮಿತ್ತಮಾರ್, ಪ್ರಧಾನ ಸಂಚಾಲಕರಾಗಿ ಪಿ. ಎಚ್. ನಿತ್ಯಾನಂದ ಶೆಟ್ಟಿ ನೇಮಕ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!