22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ಡಿಕ್ಕಿ ಯಾಗಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಇತ್ತೀಚೆಗೆ ವರದಿಯಾಗಿದೆ.

ಬೆಳ್ತಂಗಡಿ ಉಮೇಶ್ ಗೌಡ (41 ವರ್ಷ), ರವರ ದೂರಿನಂತೆ ಜು.31 ರಂದು ಮಧ್ಯಾಹ್ನ, ಅವರ ದ್ವಿಚಕ್ರ ವಾಹನದಲ್ಲಿ ಅವರ ಹೆಂಡತಿ ವಿನೋದರವರನ್ನು ಸಹಸವಾರಳನ್ನಾಗಿ ಕುಳ್ಳಿರಿಸಿಕೊಂಡು, ಬೆಳ್ತಂಗಡಿಯಿಂದ ಬಂದಾರು ಕಡೆಗೆ ತೆರಳುತ್ತಾ, ಕೊಯ್ಯುರು ಗ್ರಾಮದ ಮಲೆಬೆಟ್ಟು ಎಂಬಲ್ಲಿಗೆ ತಲುಪುತ್ತಿದ್ದಂತೆ, ಉಮೇಶ್ ಗೌಡರವರು ಮುಂದಿನಿಂದ ಹೋಗುತ್ತಿದ್ದ ಆಟೋರಿಕ್ಷಾವನ್ನು ಅದರ ಚಾಲಕ ಸೋಮಶೇಖರ್ ರವರು, ದುಡುಕುತನದಿಂದ ಚಲಾಯಿಸಿ ಆಟೋರಿಕ್ಷಾ ಉಮೇಶ್ ಗೌಡ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿರುತ್ತದೆ.

ಪರಿಣಾಮ ದ್ವಿಚಕ್ರ ಸವಾರರು ವಾಹನ ಸಮೇತ ಇಬ್ಬರು ರಸ್ತೆಗೆ ಬಿದ್ದು ಉಮೇಶ್ ಗೌಡರವರು ಗಾಯಗೊಂಡಿದ್ದು, ಅವರ ಹೆಂಡತಿಗೆ ಯಾವುದೇ ರೀತಿಯ ಗಾಯಗಳಾಗಿರುವುದಿಲ್ಲ. ಉಮೇಶ್ ಗೌಡ ಉಜಿರೆಯ ಎಸ್ ಡಿ ಎಮ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದವರು, ನಂತರ ಗಾಯ ಉಲ್ಬಣಗೊಂಡು ಗುರುವಾಯನಕೆರೆಯ ಅಭಯ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 82/2024 ಕಲಂ: 281, 125(a), BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya
error: Content is protected !!