25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ ಸಂಭವಿಸಿದ್ದು ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಹಾಗೂ ಸಮರೋಪಾದಿಯಲ್ಲಿ ಕೈಗೊಳ್ಳುವುದರ ಜೊತೆಗೆ ಕೂಡಲೇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ ಸಂಭವಿಸಿದ್ದು ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಹಾಗೂ ಸಮರೋಪಾದಿಯಲ್ಲಿ ಕೈಗೊಳ್ಳುವುದರ ಜೊತೆಗೆ ಕೂಡಲೇ ಸೂಕ್ತ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ, ಕಂದಾಯ ಸಚಿವರಾದ ಕೃಷ್ಣೇಬೈರೇಗೌಡ, ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಇತಿಹಾಸ ಕಂಡರಿಯದ ದೊಡ್ಡ ಮಟ್ಟದ ಪ್ರವಾಹ ಉಂಟಾಗಿ, ಇಡೀ ಜಿಲ್ಲೆಯ ಜನಜೀವನವೇ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದ್ದು ಊಹಿಸಲೂ ಸಾಧ್ಯವಾಗದ ರೀತಿಯಲ್ಲಿ ಅತ್ಯಂತ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಬೇಕಾಗಿ ಬಂದಿದೆ.


ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ದೊಡ್ಡ ಪ್ರಮಾಣದ ಗುಡ್ಡ ಕುಸಿತ ಹಾಗೂ ಭೂಕುಸಿತ ಸಂಭವಿಸಿ, ಬಹುತೇಕ ಕಡೆ ರಸ್ತೆ ಸಂಪರ್ಕಗಳು ಸಂಪೂರ್ಣವಾಗಿ ಕಡಿತಗೊಂಡಿವೆ. ಜಿಲ್ಲೆಯಲ್ಲಿನ ಬಹುತೇಕ ಹೆದ್ದಾರಿಗಳು ನದಿಯಂತಾಗಿದ್ದು, ಇಡೀ ಜಿಲ್ಲೆಯಲ್ಲಿ ಭೂಮಾರ್ಗ ಸಂಚಾರವೇ ಅಪಾಯಕ್ಕೆ ಸಿಲುಕಿದೆ. ಹಲವಾರು ಮನೆಗಳು ಕುಸಿತದಿಂದ ಹಾನಿಗೊಂಡಿದ್ದು, ಸಾವಿರಾರು ಜನರು ನಿರ್ವಸಿತರಾಗಿದ್ದಾರೆ. ಅನೇಕ ಕಡೆಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಹಲವಾರು ಗ್ರಾಮಗಳು ಮುಳುಗಡೆಯಾಗಿದ್ದು ಸಂಕಷ್ಟಕ್ಕೆ ಒಳಗಾಗಿರುವ ಕುಟುಂಬಗಳನ್ನು ಸ್ಥಳಾಂತರ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಘಾಟಿ ಪರಿಸರದಲ್ಲಿ ಸಾಕಷ್ಟು ಅಪಾಯದ ಪರಿಸ್ಥಿತಿ ಇದ್ದು, ಘಾಟಿ ಪ್ರದೇಶದಲ್ಲಿ ಪ್ರಯಾಣಿಕರ ಪರದಾಟ ಹೇಳತೀರದು. ಜಿಲ್ಲೆಯಾದ್ಯಂತ ಹಲವಾರು ತೋಟಗಳು ಜಲಾವೃತಗೊಂಡಿದ್ದು ತೋಟಗಾರಿಕೆ ಹಾಗೂ ಇತರೇ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಇಡೀ ರೈತ ಸಮೂಹವೇ ಅತ್ಯಂತ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದೆ.

ಜಿಲ್ಲೆಯಲ್ಲಿ ಇಂದೆಂದೂ ಸಂಭವಿಸಿದ ಮಟ್ಟದಲ್ಲಿ ತೀವು ತರದ ಹಾನಿಯಾಗಿದ್ದು, ತತಕ್ಷಣವೇ ಸಂಕಷ್ಟಕ್ಕೀಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಪರಿಣಾಮಕಾರಿಯಾಗಿ ಹಾಗೂ ಸಮರೋಪಾದಿಯಲ್ಲಿ ಕೈಗೊಳ್ಳುವುದರ ಜೊತೆಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕಾಗಿ ಅವರು ಮನವಿ ಮೂಲಕ ಒತ್ತಾಯಿಸಿದರು.

Related posts

ಉಜಿರೆಯಲ್ಲಿ ಗುರುಪೂರ್ಣಿಮಾ ಮಹೋತ್ಸವ ಸಂಪನ್ನ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya
error: Content is protected !!