22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ ಸಂಭವಿಸಿದ್ದು ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಹಾಗೂ ಸಮರೋಪಾದಿಯಲ್ಲಿ ಕೈಗೊಳ್ಳುವುದರ ಜೊತೆಗೆ ಕೂಡಲೇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ ಸಂಭವಿಸಿದ್ದು ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಹಾಗೂ ಸಮರೋಪಾದಿಯಲ್ಲಿ ಕೈಗೊಳ್ಳುವುದರ ಜೊತೆಗೆ ಕೂಡಲೇ ಸೂಕ್ತ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ, ಕಂದಾಯ ಸಚಿವರಾದ ಕೃಷ್ಣೇಬೈರೇಗೌಡ, ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಇತಿಹಾಸ ಕಂಡರಿಯದ ದೊಡ್ಡ ಮಟ್ಟದ ಪ್ರವಾಹ ಉಂಟಾಗಿ, ಇಡೀ ಜಿಲ್ಲೆಯ ಜನಜೀವನವೇ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದ್ದು ಊಹಿಸಲೂ ಸಾಧ್ಯವಾಗದ ರೀತಿಯಲ್ಲಿ ಅತ್ಯಂತ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಬೇಕಾಗಿ ಬಂದಿದೆ.


ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ದೊಡ್ಡ ಪ್ರಮಾಣದ ಗುಡ್ಡ ಕುಸಿತ ಹಾಗೂ ಭೂಕುಸಿತ ಸಂಭವಿಸಿ, ಬಹುತೇಕ ಕಡೆ ರಸ್ತೆ ಸಂಪರ್ಕಗಳು ಸಂಪೂರ್ಣವಾಗಿ ಕಡಿತಗೊಂಡಿವೆ. ಜಿಲ್ಲೆಯಲ್ಲಿನ ಬಹುತೇಕ ಹೆದ್ದಾರಿಗಳು ನದಿಯಂತಾಗಿದ್ದು, ಇಡೀ ಜಿಲ್ಲೆಯಲ್ಲಿ ಭೂಮಾರ್ಗ ಸಂಚಾರವೇ ಅಪಾಯಕ್ಕೆ ಸಿಲುಕಿದೆ. ಹಲವಾರು ಮನೆಗಳು ಕುಸಿತದಿಂದ ಹಾನಿಗೊಂಡಿದ್ದು, ಸಾವಿರಾರು ಜನರು ನಿರ್ವಸಿತರಾಗಿದ್ದಾರೆ. ಅನೇಕ ಕಡೆಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಹಲವಾರು ಗ್ರಾಮಗಳು ಮುಳುಗಡೆಯಾಗಿದ್ದು ಸಂಕಷ್ಟಕ್ಕೆ ಒಳಗಾಗಿರುವ ಕುಟುಂಬಗಳನ್ನು ಸ್ಥಳಾಂತರ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಘಾಟಿ ಪರಿಸರದಲ್ಲಿ ಸಾಕಷ್ಟು ಅಪಾಯದ ಪರಿಸ್ಥಿತಿ ಇದ್ದು, ಘಾಟಿ ಪ್ರದೇಶದಲ್ಲಿ ಪ್ರಯಾಣಿಕರ ಪರದಾಟ ಹೇಳತೀರದು. ಜಿಲ್ಲೆಯಾದ್ಯಂತ ಹಲವಾರು ತೋಟಗಳು ಜಲಾವೃತಗೊಂಡಿದ್ದು ತೋಟಗಾರಿಕೆ ಹಾಗೂ ಇತರೇ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಇಡೀ ರೈತ ಸಮೂಹವೇ ಅತ್ಯಂತ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದೆ.

ಜಿಲ್ಲೆಯಲ್ಲಿ ಇಂದೆಂದೂ ಸಂಭವಿಸಿದ ಮಟ್ಟದಲ್ಲಿ ತೀವು ತರದ ಹಾನಿಯಾಗಿದ್ದು, ತತಕ್ಷಣವೇ ಸಂಕಷ್ಟಕ್ಕೀಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಪರಿಣಾಮಕಾರಿಯಾಗಿ ಹಾಗೂ ಸಮರೋಪಾದಿಯಲ್ಲಿ ಕೈಗೊಳ್ಳುವುದರ ಜೊತೆಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕಾಗಿ ಅವರು ಮನವಿ ಮೂಲಕ ಒತ್ತಾಯಿಸಿದರು.

Related posts

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ಜ.26: ಕುವೆಟ್ಟು-ಓಡಿಲ್ನಾಳ ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya
error: Content is protected !!