25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

ಬೆಳ್ತಂಗಡಿ : ಆ.1ರಂದು ಸುರಿದು ಭಾರೀ ಮಳೆಗೆ ಕಳಿಯ ಗ್ರಾಮ ಖುಷಿದ ಮುಡಾಯಿಪಲ್ಕೆ ಅಣ್ಣು ಎಂಬವರ ಮನೆಯ ಒಂದು ಭಾಗ ಕುಸಿತವಾಗಿ ಅವರ ತಲೆಗೆ ಗಂಭೀರ ಗಾಯವಾಗಿದೆ.

ಮಧ್ಯಾಹ್ನ ಈ ಘಟನೆ ನಡೆದಿದ್ದು ಅಣ್ಣು ಅವರು ಊಟ ಮುಗಿಸಿ ಮಲಗಿದ್ದರು. ಆಗ ಈ ಘಟನೆ ನಡೆದಿದೆ. ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ನಿರ್ದೇಶಕ ನೇವಿಲ್ ಸ್ಟೀವನ್ ಮೊರಾಸ್ ಅವರು ಘಟನೆ ಯನ್ನು ಕಳಿಯ ಗ್ರಾಮಾಧಿಕಾರಿ ಪ್ರಥ್ವಿ ಶೆಟ್ಟಿ ಅವರಿಗೆ ವಿಷಯ ತಿಳಿಸಿದ್ದು, ತಕ್ಷಣ ಗಾಯಗೊಂಡ ಅಣ್ಣು ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್,ಉಪಾಧ್ಯಕ್ಷೆ ಇಂದಿರಾ ಬಿ.ಶೆಟ್ಟಿ, ಸದಸ್ಯರಾದ ಮೋಹಿನಿ,ವಿಜಯ ಕುಮಾರ್ ಕೆ, ಮರೀಟಾ ಪಿಂಟೋ,ಪುಷ್ಪಲತಾ, ಶ್ವೇತಾ, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ ಹಾಗೂ ಕಾರ್ಯದರ್ಶಿ ಕುಂಞ್ಞ ಕೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ,ಮುದ್ದು ಮಕ್ಕಳಾಟವೇ ಕೃಷ್ಣ ಆಟ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ,

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya
error: Content is protected !!