22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ವೈಚಾರಿಕ ಹಾಗೂ ವೈಜ್ಞಾನಿಕ ವಿಚಾರಗಳನ್ನು ಒಳಗೊಂಡ ತುಳುನಾಡಿನ ಆಚರಣೆಗಳು ಬಹು ವೈಶಿಷ್ಟ್ಯತೆಯಿಂದ ಕೂಡಿದೆ ಎಂದು ವಾಣಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಮೀನಾಕ್ಷಿ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ಜರಗಿದ ಆಟಿ ಒಂಜಿ ನೆಂಪು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ತುಳು ನಾಡಿನ ಜನರು ಪ್ರಕೃತಿಗೆ ಪೂರಕವಾಗಿ ನಡೆದುಕೊಂಡಿದ್ದು ವರ್ಷದ ಎಲ್ಲಾ ಕಾಲದಲ್ಲೂ ಬದುಕುವ ಕಲೆಯನ್ನು ರೂಡಿಸಿಕೊಂಡಿದ್ದರು. ಆಷಾಢ ತಿಂಗಳಲ್ಲಿ ಆಹಾರದ ಕೊರತೆಯಾದಾಗ ಪರಿಸರದಲ್ಲಿ ದೊರೆಯುವ ಸೊಪ್ಪು, ಗೆಡ್ಡೆ , ಗೆಣಸುಗಳನ್ನು ತಿಂದು ಜೀವಿಸುವುದರೊಂದಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡಿದ್ದರು. ಇದರಿಂದ ವರ್ಷವಿಡಿ ರೋಗ ಮುಕ್ತರಾಗಿರಲು ಸಾಧ್ಯವಾಗಿತ್ತು. ಇಂದಿನ ಕಾಲದ ಜನರು ತುಳುನಾಡಿನ ಆಚರಣೆಗಳ ಮಹತ್ವವನ್ನು ತಿಳಿದುಕೊಂಡು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು ಎಂದರು.


ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ ಚೆನ್ನೆಮಣೆ ಆಟ ಆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಇವತ್ತಿನ ಜನರು ಪ್ರಕೃತಿದತ್ತ ಆಹಾರದ ಬದಲು ಹೆಚ್ಚಾಗಿ ರೆಸ್ಟೋರೆಂಟ್ ಆಹಾರವನ್ನು ತಿನ್ನುತ್ತಾರೆ. ಹಾಗಾಗಿ ಬೇರೆ ಬೇರೆ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಕಷ್ಟಪಟ್ಟು ದುಡಿದು ಉತ್ತಮವಾದ ಆಹಾರವನ್ನು ತಿಂದಾಗ ಮಾತ್ರ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಸಾಧ್ಯ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು.
‌‌ ತುಳು ಸಂಘದ ಸಂಯೋಜಕರಾದ ಮಹಾಬಲ ಗೌಡ ಸ್ವಾಗತಿಸಿದರು. ಉಪನ್ಯಾಸಕ ಬೆಳ್ಳಿಯಪ್ಪ. ಕೆ ವಂದಿಸಿದರು. ಕುಮಾರಿ ಅನುಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya
error: Content is protected !!