March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

ಬೆಳ್ತಂಗಡಿ; ಖಾಝಿ ಕೂರತ್‌ ತಂಙಳ್ ಅಕಾಲಿಕ ನಿಧನದಿಂದ ತೆರವಾಗಿರುವ ಖಾಝಿ ಸ್ಥಾನಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಖಮರುಲ್ ಉಲಮಾ ಕಾಂತಪುರಂ ಶೈಖ್ ಅಬೂಬಕ್ಕರ್ ಅಹಮದ್ (ಎ.ಪಿ ಉಸ್ತಾದ್) ಅವರನ್ನು ಖಾಝಿಯಾಗಿ ಸ್ವೀಕರಿಸುವ ಐತಿಹಾಸಿಕ ಸಮಾರಂಭದ ಬಗ್ಗೆ ಆ.2 ರಂದು ಬೆಳ್ತಂಗಡಿಯಲ್ಲಿ ಸಮುದಾಯ ಮುಖಂಡರ ಸಮಾಲೋಚನಾ ಸಭೆ ನಡೆಯಿತು.

ಖಾಝಿ ಬೈಅತ್ ಬಳಿಕ ಅವರ ಪರಮಾಧಿಕಾರದಂತೆ ಅವರಿಗೆ ಸಹಾಯಕರಾಗಿ ನೇಮಿಸುವ ವೇಳೆ ಸಯ್ಯಿದ್ ಕಾಜೂರು ತಂಙಳ್ ಅವರನ್ನು ಪರಿಗಣಿಸುವಂತೆ ಸೇರಿದ್ದ ಮುಖಂಡರು ಒಕ್ಕೊರಲ ಆಗ್ರಹ ವ್ಯಕ್ತಪಡಿಸಿದರು. ಈ ಬಗ್ಗೆ ಸಂಯುಕ್ತ ಜಮಾಅತ್ ಅಧ್ಯಕ್ಷರನ್ನು ಭೇಟಿ ಮಾಡುವುದು ಹಾಗೂ ಎ.ಪಿ ಉಸ್ತಾದ್ ಅವರನ್ನು ಭೇಟಿ ಮಾಡಲು ನಿಯೋಗ ರಚಿಸಲಾಯಿತು.
ಕಳೆದ ಇಷ್ಟೂ ವರ್ಷಗಳಲ್ಲಿ ಬೆಳ್ತಂಗಡಿ ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿಯಾಗಿ ಸೇವೆ ಸಲ್ಲಿಸಿದ ಸಾದಾತ್ ತಂಙಳ್ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಸಭೆಯ ನಿರ್ಣಯದಂತೆ ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಅವರನ್ನು ನಿಯೋಗ ಭೇಟಿ ಮಾಡಿ ಸಭೆಯ ಇಂಗಿತವನ್ನು ಹಾಗೂ ಬೇಡಿಕೆಗಳನ್ನು ಮುಂದಿಡಲಾಯಿತು.


ಸಭೆಯಲ್ಲಿ ಹಲವು ಮೊಹಲ್ಲಾಗಳ ಪ್ರಮುಖರು, ಸಂಯುಕ್ತ ಜಮಾಅತ್ ಪ್ರಮುಖರು ಹಾಗೂ ಸಮುದಾಯ ನಾಯಕರುಗಳು ಭಾಗವಹಿಸಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!