24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

ಬೆಳ್ತಂಗಡಿ; ಖಾಝಿ ಕೂರತ್‌ ತಂಙಳ್ ಅಕಾಲಿಕ ನಿಧನದಿಂದ ತೆರವಾಗಿರುವ ಖಾಝಿ ಸ್ಥಾನಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಖಮರುಲ್ ಉಲಮಾ ಕಾಂತಪುರಂ ಶೈಖ್ ಅಬೂಬಕ್ಕರ್ ಅಹಮದ್ (ಎ.ಪಿ ಉಸ್ತಾದ್) ಅವರನ್ನು ಖಾಝಿಯಾಗಿ ಸ್ವೀಕರಿಸುವ ಐತಿಹಾಸಿಕ ಸಮಾರಂಭದ ಬಗ್ಗೆ ಆ.2 ರಂದು ಬೆಳ್ತಂಗಡಿಯಲ್ಲಿ ಸಮುದಾಯ ಮುಖಂಡರ ಸಮಾಲೋಚನಾ ಸಭೆ ನಡೆಯಿತು.

ಖಾಝಿ ಬೈಅತ್ ಬಳಿಕ ಅವರ ಪರಮಾಧಿಕಾರದಂತೆ ಅವರಿಗೆ ಸಹಾಯಕರಾಗಿ ನೇಮಿಸುವ ವೇಳೆ ಸಯ್ಯಿದ್ ಕಾಜೂರು ತಂಙಳ್ ಅವರನ್ನು ಪರಿಗಣಿಸುವಂತೆ ಸೇರಿದ್ದ ಮುಖಂಡರು ಒಕ್ಕೊರಲ ಆಗ್ರಹ ವ್ಯಕ್ತಪಡಿಸಿದರು. ಈ ಬಗ್ಗೆ ಸಂಯುಕ್ತ ಜಮಾಅತ್ ಅಧ್ಯಕ್ಷರನ್ನು ಭೇಟಿ ಮಾಡುವುದು ಹಾಗೂ ಎ.ಪಿ ಉಸ್ತಾದ್ ಅವರನ್ನು ಭೇಟಿ ಮಾಡಲು ನಿಯೋಗ ರಚಿಸಲಾಯಿತು.
ಕಳೆದ ಇಷ್ಟೂ ವರ್ಷಗಳಲ್ಲಿ ಬೆಳ್ತಂಗಡಿ ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿಯಾಗಿ ಸೇವೆ ಸಲ್ಲಿಸಿದ ಸಾದಾತ್ ತಂಙಳ್ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಸಭೆಯ ನಿರ್ಣಯದಂತೆ ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಅವರನ್ನು ನಿಯೋಗ ಭೇಟಿ ಮಾಡಿ ಸಭೆಯ ಇಂಗಿತವನ್ನು ಹಾಗೂ ಬೇಡಿಕೆಗಳನ್ನು ಮುಂದಿಡಲಾಯಿತು.


ಸಭೆಯಲ್ಲಿ ಹಲವು ಮೊಹಲ್ಲಾಗಳ ಪ್ರಮುಖರು, ಸಂಯುಕ್ತ ಜಮಾಅತ್ ಪ್ರಮುಖರು ಹಾಗೂ ಸಮುದಾಯ ನಾಯಕರುಗಳು ಭಾಗವಹಿಸಿದ್ದರು.

Related posts

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ಬಂದಾರು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಪುರುಷೋತ್ತಮ ನೇಮಕ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!