September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

ಬೆಳ್ತಂಗಡಿ; ಖಾಝಿ ಕೂರತ್‌ ತಂಙಳ್ ಅಕಾಲಿಕ ನಿಧನದಿಂದ ತೆರವಾಗಿರುವ ಖಾಝಿ ಸ್ಥಾನಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಖಮರುಲ್ ಉಲಮಾ ಕಾಂತಪುರಂ ಶೈಖ್ ಅಬೂಬಕ್ಕರ್ ಅಹಮದ್ (ಎ.ಪಿ ಉಸ್ತಾದ್) ಅವರನ್ನು ಖಾಝಿಯಾಗಿ ಸ್ವೀಕರಿಸುವ ಐತಿಹಾಸಿಕ ಸಮಾರಂಭದ ಬಗ್ಗೆ ಆ.2 ರಂದು ಬೆಳ್ತಂಗಡಿಯಲ್ಲಿ ಸಮುದಾಯ ಮುಖಂಡರ ಸಮಾಲೋಚನಾ ಸಭೆ ನಡೆಯಿತು.

ಖಾಝಿ ಬೈಅತ್ ಬಳಿಕ ಅವರ ಪರಮಾಧಿಕಾರದಂತೆ ಅವರಿಗೆ ಸಹಾಯಕರಾಗಿ ನೇಮಿಸುವ ವೇಳೆ ಸಯ್ಯಿದ್ ಕಾಜೂರು ತಂಙಳ್ ಅವರನ್ನು ಪರಿಗಣಿಸುವಂತೆ ಸೇರಿದ್ದ ಮುಖಂಡರು ಒಕ್ಕೊರಲ ಆಗ್ರಹ ವ್ಯಕ್ತಪಡಿಸಿದರು. ಈ ಬಗ್ಗೆ ಸಂಯುಕ್ತ ಜಮಾಅತ್ ಅಧ್ಯಕ್ಷರನ್ನು ಭೇಟಿ ಮಾಡುವುದು ಹಾಗೂ ಎ.ಪಿ ಉಸ್ತಾದ್ ಅವರನ್ನು ಭೇಟಿ ಮಾಡಲು ನಿಯೋಗ ರಚಿಸಲಾಯಿತು.
ಕಳೆದ ಇಷ್ಟೂ ವರ್ಷಗಳಲ್ಲಿ ಬೆಳ್ತಂಗಡಿ ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿಯಾಗಿ ಸೇವೆ ಸಲ್ಲಿಸಿದ ಸಾದಾತ್ ತಂಙಳ್ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಸಭೆಯ ನಿರ್ಣಯದಂತೆ ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಅವರನ್ನು ನಿಯೋಗ ಭೇಟಿ ಮಾಡಿ ಸಭೆಯ ಇಂಗಿತವನ್ನು ಹಾಗೂ ಬೇಡಿಕೆಗಳನ್ನು ಮುಂದಿಡಲಾಯಿತು.


ಸಭೆಯಲ್ಲಿ ಹಲವು ಮೊಹಲ್ಲಾಗಳ ಪ್ರಮುಖರು, ಸಂಯುಕ್ತ ಜಮಾಅತ್ ಪ್ರಮುಖರು ಹಾಗೂ ಸಮುದಾಯ ನಾಯಕರುಗಳು ಭಾಗವಹಿಸಿದ್ದರು.

Related posts

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಋಷಿ ಬಿ . ಶೆಟ್ಟಿ ಕೆಎಸ್‌ಸಿಎ ಇಲೆವೆನ್ ತಂಡಕ್ಕೆ ಆಯ್ಕೆ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

Suddi Udaya
error: Content is protected !!