September 6, 2026
ಸಂಘ-ಸಂಸ್ಥೆಗಳು

ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ಟಾಪ್ 10 ರಲ್ಲಿ ಜೆ ಸಿ ಐ ಬೆಳ್ತಂಗಡಿ ಮಂಜಶ್ರೀ

ಬೆಳ್ತಂಗಡಿ :ಜೆಸಿಐ ಭಾರತದ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಸಮ್ಮೇಳನವು ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಪ್ರಸ್ತಕ ವರ್ಷದಲ್ಲಿ ಜೆಸಿಐ ಭಾರತಕ್ಕೆ ಸಲ್ಲಿಸಿದ ಸದಸ್ಯತ್ವ ಶುಲ್ಕ ಮತ್ತು ಜೆಸಿಐ ಭಾರತದ ಫೌಂಡೇಶನ್ ಗೆ ನೀಡಿದ ದೇಣಿಗೆ ಹಾಗೂ ಹೊಸ ಸದಸ್ಯರ ಸೇರ್ಪಡೆ ಮತ್ತು ನಡೆಸಿದ ಓರಿಯೆಂಟಷನ್ ಕಾರ್ಯಕ್ರಮವನ್ನು ಆದರಿಸಿ ಕೊಡ ಮಾಡುವ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಪ್ರಶಸ್ತಿಯಲ್ಲಿ 10 ನೇ ಸ್ಥಾನದ ಪ್ರಶಸ್ತಿಗೆ ಭಾಜನವಾಗಿದೆ.

ವಲಯಧ್ಯಕ್ಷರಾದ ಗಿರೀಶ್ ಎಸ್ ಪಿ ಯವರಿಂದ
ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕ್ರಿಯಾಶೀಲ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ ರವರು ಸದಸ್ಯರೊಂದಿಗೆ ಪ್ರಶಸ್ತಿಯನ್ನು ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷರಾದ
ಘಟಕದ ನಿಕಟಪೂರ್ವಧ್ಯಕ್ಷರಾದ ಶಂಕರ್ ರಾವ್,
ಪೂರ್ವ ಅಧ್ಯಕ್ಷರುಗಳಾದ ಸಂತೋಷ್ ಪಿ ಕೋಟ್ಯಾನ್, ಪ್ರಶಾಂತ್ ಲೈಲಾ, ಉಪಾಧ್ಯಕ್ಷರುಗಳಾದ ಪ್ರೀತಮ್ ಶೆಟ್ಟಿ, ಆಶಾ ಪ್ರಶಾಂತ್, ಚಂದ್ರಹಾಸ್, ಶೈಲೇಶ್, ಸಂಯೋಜಕರಾದ ರಜತ್, ಲೇಡಿ ಜೆಸಿ ಸಂಯೋಜಕರಾದ Jc ಶ್ರುತಿ ರಂಜಿತ್, ಅಮೃತಾ ಎಸ್ ಕೋಟ್ಯಾನ್ ರವರು ಭಾಗವಹಿಸಿದರು.

Related posts

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

Suddi Udaya

ಎ.12: ಬೆಳ್ತಂಗಡಿಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಜೂ.28: ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೂರು ಕಡೆ ಸಮಾರಂಭ

Suddi Udaya
error: Content is protected !!