July 23, 2026
ಅಪರಾಧ ಸುದ್ದಿ

ಬಾಲಕಿ ಮೇಲೆ ಅತ್ಯಚಾರ ಪ್ರಕರಣ ಬೆಳ್ತಂಗಡಿ ಆರೋಪಿಗೆ ಕಠಿಣ ಶಿಕ್ಷೆ

ಮಂಗಳೂರು; ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿಯ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ  ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ (26) ಶಿಕ್ಷೆಗೊಳಗದ ಆರೋಪಿ.

ಆರೋಪಿ ಯೋಗೀಶ 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿಕೊಂಡು ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ.ಪರಿಣಾಮ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ವೃತ್ತ ನಿರೀಕ್ಷಕ ಶಿವ ಕುಮಾರ್ ಬಿ. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. 13 ಸಾಕ್ಷಿದಾರರನ್ನು ವಿಚಾರಿಸಿ 29 ದಾಖಲೆಗಳನ್ನು ಗುರುತಿಸಲಾಗಿತ್ತು. ಡಿಎನ್‌ಎ ವರದಿಗಳು, ಸಾಕ್ಷ್ಯ, ಪೂರಕ ಸಾಕ್ಷ್ಯ ಪರಿಗಣಿಸಿ ಹಾಗೂ ವಾದ ವಿವಾದ ಆಲಿಸಿದ ನ್ಯಾಯಾಲಯವು ಆರೋಪಿ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ.

ಅದರಂತೆ  ನ್ಯಾಯಾಧೀಶರಾದ ಮಾನು ಕೆ.ಎಸ್.ಅವರು ಆರೋಪಿಗೆ ಭಾ.ದಂ.ಸಂ. ಕಲಂ 376(2)(ಎನ್) ಮತ್ತು ಕಲಂ 6 ಪೊಕ್ಸೋ ಕಾಯಿದೆಯಂತೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 357 (ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆಯಡಿಯಲ್ಲಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 1,50,000 ರೂ. ಹಾಗೂ ನೊಂದ ಬಾಲಕಿಯ ಮಗುವಿಗೆ 3 ಲ.ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಕೆ.ಬದರಿನಾಥ ನಾಯರಿ ವಾದಿಸಿದ್ದರು.

Related posts

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya
error: Content is protected !!