ಮುಂಡೂರು ಮತ್ತು ಮಚ್ಚಿನ ಗ್ರಾಮಗಳಲ್ಲಿ ಮಣ್ಣು ಕುಸಿದು ಹಾನಿ ಉಂಟಾದ ಮನೆಗಳಿಗೆ ಭೇಟಿ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಮುಂಡೂರು ಗ್ರಾಮದ ಸೀತರಾಮ ಆಚಾರ್ಯ ಮತ್ತು ರಮೇಶ್ ಆಚಾರ್ಯ ಅವರ ಮನೆಯ ಹಿಂಭಾಗ ಮಣ್ಣು ಕುಸಿದು ಮನೆಗೆ ಹಾನಿಯಾಗಿದ್ದುಹಾಗೂ ಮಚ್ಚಿನ ಗ್ರಾಮದಲ್ಲಿ ಹಲವು ಕಡೆ ಮನೆಯ ಹಿಂಭಾಗ ಗುಡ್ಡ ಕುಸಿದಿದ್ದು ಆ ಮನೆಗಳಿಗೆ ಭಾರತೀಯ ಜನತಾ ಪಾರ್ಟಿಯ ಮಂಡಲದ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಪಾರೆಂಕಿ, ಜಯಾನಂದ ಗೌಡ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ವಸಂತಿ ಮಚ್ಚಿನ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

error: Content is protected !!