25.7 C
ಪುತ್ತೂರು, ಬೆಳ್ತಂಗಡಿ
May 17, 2025
ಸರ್ಕಾರಿ ಇಲಾಖಾ ಸುದ್ದಿ

ಮೊಳಹಳ್ಳಿ ಶಿವರಾಯರ 124ನೇ ಜನ್ಮದಿನೋತ್ಸವ

ಬೆಳ್ತಂಗಡಿ :ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಪಿ ತಾಮಹ ಎಂದೇ ಖ್ಯಾತರಾದ ಮೊಳಹಳ್ಳಿ ಶಿವರಾಯರ 124ನೇ ಜನ್ಮದಿನೋತ್ಸವವನ್ನು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೇಂದ್ರ ಕಚೇರಿಯಲ್ಲಿ ಆಚರಿಸಲಾಯಿತು.
ವೃತ್ತಿಯಲ್ಲಿ ವಕೀಲರಾಗಿದ್ದ ಶಿವರಾಯರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸ್ಥಾಪಕ ಅಧ್ಯಕ್ಷರಾಗಿ, ಪುತ್ತೂರು ಟೌನ್ ಕೋ ಆಪರೇಟಿವ್ ಬ್ಯಾಂಕಿನ ಸ್ಥಾಪಕ ಅಧ್ಯಕ್ಷರಾಗಿ ಜಿಲ್ಲೆಯಾದ್ಯಂತ ಹಲವಾರು ಸಹಕಾರಿ ಸಂಘಗಳನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಹಕಾರಿ ಕ್ಷೇತ್ರದ ಮೂಲಕ ಕೃಷಿಕರ ಕೃಷಿ ಕಾರ್ಮಿಕರ ಬಗ್ಗೆ ಅಪಾರ ಕಾಳಜಿ ವಹಿಸಿ, ಮಧ್ಯವರ್ತಿಗಳನ್ನು ತಪ್ಪಿಸಿ ನೇರವಾಗಿ ಕೃಷಿಕರಿಗೆ ಸಹಕಾರಿ ಸಂಘಗಳ ಮೂಲಕ ಸಾಲವನ್ನು ಒದಗಿಸುವ ಯೋಜನೆಯನ್ನು ಆರಂಭಿಸಿದ ಕೀರ್ತಿ ಶಿವರಾಯರಿಗೆ ಸಲ್ಲುತ್ತದೆ. ಸಹಕಾರಿ ಕ್ಷೇತ್ರವಲ್ಲದೆ, ಶಿವರಾಮ ಕಾರಂತರ ಜೊತೆ ಸೇರಿ ಹಳ್ಳಿಹಳ್ಳಿಗಳಲ್ಲಿ ಶಾಲೆಗಳನ್ನು ಆರಂಭಿಸಿದರು. ಇವರ ಜೀವನ ಮೌಲ್ಯಗಳನ್ನು ಅರಿತು ಗ್ರಾಮೀಣ ಜನರ ಅಭಿವೃದ್ಧಿಗೆ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಸಹಕಾರಿಗಳೆಲ್ಲ ಅಳವಡಿಸಿಕೊಳ್ಳಬೇಕಾಗಿದೆಯೆಂದು ನಾರಾಯಣ ಫಡಕೆ ಮುಂಡಾಜೆ ಅಭಿಪ್ರಾಯ ಪಟ್ಟರು. ಸಂಘದ ಅಧ್ಯಕ್ಷ ಜನಾರ್ಧನ ನೂಜಿ ಶಿವರಾಯರ ಆದರ್ಶವನ್ನು ಅಳವಡಿಸಿಕೊಳ್ಳುವಂತೆ ಕೇಳಿಕೊಂಡರು.ಸಂಘದ ನಿರ್ದೇಶಕರಾದ ಜ್ಯೋತಿ ಪಡಕೆ ,
,ಕೊರಗಪ್ಪ ನಾಯ್ಕ ಸುಮಾ ಗೋಖಲೆ, ಸಿಇಓ ಚಂದ್ರಕಾಂತ ಪ್ರಭು ಉಪಸ್ಥಿತರಿದ್ದರು. ಸಂಘದ, ಸ್ನೇಹ ಸ್ವಾಗತಿಸಿ ಶಾಖಾವ್ಯವಸ್ಥಾಪಕ ಸದಾನಂದ ಧನ್ಯವಾದ ಅರ್ಪಿಸಿದರು.ಶಾಖಾ ವ್ಯವಸ್ಥಾಪಕ ಪ್ರಸನ್ನ ಪರಾಂಜಪೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಕೃಷಿ ಇಲಾಖೆಯಲ್ಲಿ 26 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಕೃಷಿ ಅಧಿಕಾರಿ ಚಿದಾನಂದ ಹೂಗಾರ್‌ರವರಿಗೆ ಬೀಳ್ಕೊಡುಗೆ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ದ.ಕ ಜಿಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya
error: Content is protected !!