ಪುಣ್ಯ ಕ್ಷೇತ್ರ ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ .

Suddi Udaya

ಬೆಳ್ತಂಗಡಿ :ಆಟಿ ಅಮಾವಾಸ್ಯೆ ಪುಣ್ಯ ದಿನದಂದುಜು 4ರಂದು ತಾಲೂಕಿನ ಪುಣ್ಯ ಕ್ಷೇತ್ರ ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಶ್ರೀ ದೇವರಿಗೆ ಪ್ರಾಥನೆ ಸಲ್ಲಿಸಿ, ತೀರ್ಥ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸವಣಾಲು ಆದಿನಾಥ ಜಿನ ಮಂದಿರದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಒಂಬತ್ತು ಲಕ್ಷ ಅನುದಾನ ಮಂಜೂರಾತಿಗೆ ಸಹಕರಿಸಿದ ರಕ್ಷಿತ್ ಶಿವರಾಂ ರವರನ್ನು ಸಮಿತಿಯವರು ಗೌರವಿಸಿದರು.ಈ ಸಂದರ್ಭದಲ್ಲಿ ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾದ ಜಯಕೀರ್ತಿ ಜೈನ್ ಸಮಿತಿಯ ಮುಖ್ಯಸ್ಥರಾದ ಕಿಶೋರ್ ಹೆಗ್ಡೆ ಸುರೇಶ್,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Comment

error: Content is protected !!