ಅಪರಾಧ ಸುದ್ದಿ

ಬಾಲಕಿ ಮೇಲೆ ಅತ್ಯಚಾರ ಪ್ರಕರಣ ಬೆಳ್ತಂಗಡಿ ಆರೋಪಿಗೆ ಕಠಿಣ ಶಿಕ್ಷೆ

ಮಂಗಳೂರು; ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿಯ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ  ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ (26) ಶಿಕ್ಷೆಗೊಳಗದ ಆರೋಪಿ.

ಆರೋಪಿ ಯೋಗೀಶ 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿಕೊಂಡು ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ.ಪರಿಣಾಮ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ವೃತ್ತ ನಿರೀಕ್ಷಕ ಶಿವ ಕುಮಾರ್ ಬಿ. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. 13 ಸಾಕ್ಷಿದಾರರನ್ನು ವಿಚಾರಿಸಿ 29 ದಾಖಲೆಗಳನ್ನು ಗುರುತಿಸಲಾಗಿತ್ತು. ಡಿಎನ್‌ಎ ವರದಿಗಳು, ಸಾಕ್ಷ್ಯ, ಪೂರಕ ಸಾಕ್ಷ್ಯ ಪರಿಗಣಿಸಿ ಹಾಗೂ ವಾದ ವಿವಾದ ಆಲಿಸಿದ ನ್ಯಾಯಾಲಯವು ಆರೋಪಿ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ.

ಅದರಂತೆ  ನ್ಯಾಯಾಧೀಶರಾದ ಮಾನು ಕೆ.ಎಸ್.ಅವರು ಆರೋಪಿಗೆ ಭಾ.ದಂ.ಸಂ. ಕಲಂ 376(2)(ಎನ್) ಮತ್ತು ಕಲಂ 6 ಪೊಕ್ಸೋ ಕಾಯಿದೆಯಂತೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 357 (ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆಯಡಿಯಲ್ಲಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 1,50,000 ರೂ. ಹಾಗೂ ನೊಂದ ಬಾಲಕಿಯ ಮಗುವಿಗೆ 3 ಲ.ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಕೆ.ಬದರಿನಾಥ ನಾಯರಿ ವಾದಿಸಿದ್ದರು.

Related posts

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಸವಣಾಲಿನಲ್ಲಿ ಬೈಕ್- ಬೈಕ್ ನಡುವೆ ಅಪಘಾತ : ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ ಹೆನ್ರಿ ಡಿ’ ಸೋಜ ಮೃತ್ಯು

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya
error: Content is protected !!