30.7 C
ಪುತ್ತೂರು, ಬೆಳ್ತಂಗಡಿ
April 24, 2026
ಸರ್ಕಾರಿ ಇಲಾಖಾ ಸುದ್ದಿ

ಮೊಳಹಳ್ಳಿ ಶಿವರಾಯರ 124ನೇ ಜನ್ಮದಿನೋತ್ಸವ

ಬೆಳ್ತಂಗಡಿ :ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಪಿ ತಾಮಹ ಎಂದೇ ಖ್ಯಾತರಾದ ಮೊಳಹಳ್ಳಿ ಶಿವರಾಯರ 124ನೇ ಜನ್ಮದಿನೋತ್ಸವವನ್ನು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೇಂದ್ರ ಕಚೇರಿಯಲ್ಲಿ ಆಚರಿಸಲಾಯಿತು.
ವೃತ್ತಿಯಲ್ಲಿ ವಕೀಲರಾಗಿದ್ದ ಶಿವರಾಯರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸ್ಥಾಪಕ ಅಧ್ಯಕ್ಷರಾಗಿ, ಪುತ್ತೂರು ಟೌನ್ ಕೋ ಆಪರೇಟಿವ್ ಬ್ಯಾಂಕಿನ ಸ್ಥಾಪಕ ಅಧ್ಯಕ್ಷರಾಗಿ ಜಿಲ್ಲೆಯಾದ್ಯಂತ ಹಲವಾರು ಸಹಕಾರಿ ಸಂಘಗಳನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಹಕಾರಿ ಕ್ಷೇತ್ರದ ಮೂಲಕ ಕೃಷಿಕರ ಕೃಷಿ ಕಾರ್ಮಿಕರ ಬಗ್ಗೆ ಅಪಾರ ಕಾಳಜಿ ವಹಿಸಿ, ಮಧ್ಯವರ್ತಿಗಳನ್ನು ತಪ್ಪಿಸಿ ನೇರವಾಗಿ ಕೃಷಿಕರಿಗೆ ಸಹಕಾರಿ ಸಂಘಗಳ ಮೂಲಕ ಸಾಲವನ್ನು ಒದಗಿಸುವ ಯೋಜನೆಯನ್ನು ಆರಂಭಿಸಿದ ಕೀರ್ತಿ ಶಿವರಾಯರಿಗೆ ಸಲ್ಲುತ್ತದೆ. ಸಹಕಾರಿ ಕ್ಷೇತ್ರವಲ್ಲದೆ, ಶಿವರಾಮ ಕಾರಂತರ ಜೊತೆ ಸೇರಿ ಹಳ್ಳಿಹಳ್ಳಿಗಳಲ್ಲಿ ಶಾಲೆಗಳನ್ನು ಆರಂಭಿಸಿದರು. ಇವರ ಜೀವನ ಮೌಲ್ಯಗಳನ್ನು ಅರಿತು ಗ್ರಾಮೀಣ ಜನರ ಅಭಿವೃದ್ಧಿಗೆ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಸಹಕಾರಿಗಳೆಲ್ಲ ಅಳವಡಿಸಿಕೊಳ್ಳಬೇಕಾಗಿದೆಯೆಂದು ನಾರಾಯಣ ಫಡಕೆ ಮುಂಡಾಜೆ ಅಭಿಪ್ರಾಯ ಪಟ್ಟರು. ಸಂಘದ ಅಧ್ಯಕ್ಷ ಜನಾರ್ಧನ ನೂಜಿ ಶಿವರಾಯರ ಆದರ್ಶವನ್ನು ಅಳವಡಿಸಿಕೊಳ್ಳುವಂತೆ ಕೇಳಿಕೊಂಡರು.ಸಂಘದ ನಿರ್ದೇಶಕರಾದ ಜ್ಯೋತಿ ಪಡಕೆ ,
,ಕೊರಗಪ್ಪ ನಾಯ್ಕ ಸುಮಾ ಗೋಖಲೆ, ಸಿಇಓ ಚಂದ್ರಕಾಂತ ಪ್ರಭು ಉಪಸ್ಥಿತರಿದ್ದರು. ಸಂಘದ, ಸ್ನೇಹ ಸ್ವಾಗತಿಸಿ ಶಾಖಾವ್ಯವಸ್ಥಾಪಕ ಸದಾನಂದ ಧನ್ಯವಾದ ಅರ್ಪಿಸಿದರು.ಶಾಖಾ ವ್ಯವಸ್ಥಾಪಕ ಪ್ರಸನ್ನ ಪರಾಂಜಪೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

Suddi Udaya

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

Suddi Udaya

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya
error: Content is protected !!