25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

ಬೆಳ್ತಂಗಡಿ: ಉಸ್ಮಾನ್ ಗರ್ಡಾಡಿಯವರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಪ್ರಮುಖ ಅಗ್ನಿಶಾಮಕ (ಲೀಡಿಂಗ್ ಫೈರ್‌ಮ್ಯಾನ್) ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿಗೊಂಡಿರುತ್ತಾರೆ.


ಇವರು 2005 ರಲ್ಲಿ ನೇರ ನೇಮಕಾತಿ ಮೂಲಕ ಇಲಾಖೆಗೆ ಸೇರ್ಪಡೆಗೊಂಡಿದ್ದು, ಶಿವಮೊಗ್ಗದಲ್ಲಿ ಇಲಾಖಾ ತರಬೇತಿ ಪಡೆದ ಬಳಿಕ ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ವರ್ಷ ಬಂಟ್ವಾಳ ಅಗ್ನಿಶಾಮಕ ಠಾಣೆಗೆ ವರ್ಗಾವಣೆಗೊಂಡಿದ್ದು, ಇದೀಗ ಪದೋನ್ನತಿ ಹೊಂದಿ ಮತ್ತೆ ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಆಗಮಿಸಿರುತ್ತಾರೆ.

ಇವರು ಇಲಾಖೆಯಲ್ಲಿ ಸಲ್ಲಿಸಿದ ಸೇವೆಗಾಗಿ 2021ನೇ ಸಾಲಿನ ಮಾನ್ಯ ಮುಖ್ಯಮಂತ್ರಿಯವರ ಚಿನ್ನದ ಪದಕಕ್ಕೆ ಭಾಜನರಾಗಿದ್ದು, ಅಗ್ನಿಶಮನ ಹಾಗೂ ರಕ್ಷಣಾ ಕಾರ್ಯದಲ್ಲಿ ಸಹಕರಿಸುವುದರೊಂದಿಗೆ ಜನರಲ್ಲಿ ಅಗ್ನಿ ಅನಾಹುತಗಳ ಹಾಗೂ ಇತರ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿಯೂ ಕೆಲಸ ನಿರ್ವಹಿಸುತ್ತಾರೆ. ಸಾರ್ವಜನಿಕರೊಡನೆ ಉತ್ತಮ ಸಂಪರ್ಕ ಸಂವಹನ ಹೊಂದಿರುವ ಇವರು ತಾಲೂಕಿನ ಗರ್ಡಾಡಿ ಗ್ರಾಮದ ನಿವಾಸಿಯಾಗಿರುತ್ತಾರೆ.

Related posts

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya
error: Content is protected !!