22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

ಬೆಳ್ತಂಗಡಿ: ಉಸ್ಮಾನ್ ಗರ್ಡಾಡಿಯವರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಪ್ರಮುಖ ಅಗ್ನಿಶಾಮಕ (ಲೀಡಿಂಗ್ ಫೈರ್‌ಮ್ಯಾನ್) ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿಗೊಂಡಿರುತ್ತಾರೆ.


ಇವರು 2005 ರಲ್ಲಿ ನೇರ ನೇಮಕಾತಿ ಮೂಲಕ ಇಲಾಖೆಗೆ ಸೇರ್ಪಡೆಗೊಂಡಿದ್ದು, ಶಿವಮೊಗ್ಗದಲ್ಲಿ ಇಲಾಖಾ ತರಬೇತಿ ಪಡೆದ ಬಳಿಕ ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ವರ್ಷ ಬಂಟ್ವಾಳ ಅಗ್ನಿಶಾಮಕ ಠಾಣೆಗೆ ವರ್ಗಾವಣೆಗೊಂಡಿದ್ದು, ಇದೀಗ ಪದೋನ್ನತಿ ಹೊಂದಿ ಮತ್ತೆ ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಆಗಮಿಸಿರುತ್ತಾರೆ.

ಇವರು ಇಲಾಖೆಯಲ್ಲಿ ಸಲ್ಲಿಸಿದ ಸೇವೆಗಾಗಿ 2021ನೇ ಸಾಲಿನ ಮಾನ್ಯ ಮುಖ್ಯಮಂತ್ರಿಯವರ ಚಿನ್ನದ ಪದಕಕ್ಕೆ ಭಾಜನರಾಗಿದ್ದು, ಅಗ್ನಿಶಮನ ಹಾಗೂ ರಕ್ಷಣಾ ಕಾರ್ಯದಲ್ಲಿ ಸಹಕರಿಸುವುದರೊಂದಿಗೆ ಜನರಲ್ಲಿ ಅಗ್ನಿ ಅನಾಹುತಗಳ ಹಾಗೂ ಇತರ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿಯೂ ಕೆಲಸ ನಿರ್ವಹಿಸುತ್ತಾರೆ. ಸಾರ್ವಜನಿಕರೊಡನೆ ಉತ್ತಮ ಸಂಪರ್ಕ ಸಂವಹನ ಹೊಂದಿರುವ ಇವರು ತಾಲೂಕಿನ ಗರ್ಡಾಡಿ ಗ್ರಾಮದ ನಿವಾಸಿಯಾಗಿರುತ್ತಾರೆ.

Related posts

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya
error: Content is protected !!