25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಂಘ-ಸಂಸ್ಥೆಗಳು

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

ಬೆಳ್ತಂಗಡಿ:ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯ ವತಿಯಿಂದ ಆ.4 ರಂದು ಉಜಿರೆಯ ಅರಿಪಾಡಿ ಮಠದ ಕಲಾವೇದಿಕೆಯಲ್ಲಿ ಆಟಿಕೂಟವನ್ನು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿ ಕೂಟ ಮಹಾ ಜಗತ್ತಿನ ಅಧ್ಯಕ್ಷ ವಿಶ್ವನಾಥ ಹೊಳ್ಳರವರು ದೀಪ ಬೆಳಗಿಸಿ ಆಟಿಕೂಟಕ್ಕೆ ಚಾಲನೆ ನೀಡಿದರು.

ನಂತರ ಆಟಿಕೂಟದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.ಮಹಿಳಾ ವೇದಿಕೆಯ ಸದಸ್ಯರಾದಂತಹ ವಿದ್ಯಾಶ್ರೀ ಅಡೂರ್ ಅವರು ಸ್ಪರ್ಧೆಗಳನ್ನು ನಿರ್ವಹಿಸಿದರು. ಮಹಿಳಾ ವೇದಿಕೆಯ ಅನೇಕ ಸದಸ್ಯರು ತುಳುನಾಡಿನ ಖಾದ್ಯಗಳನ್ನು ತಮ್ಮ ತಮ್ಮ ಮನೆಗಳಲ್ಲಿ ತಯಾರಿಸಿ ತಂದು ಕಾರ್ಯಕ್ರಮದಲ್ಲಿ ಹಂಚಿಕೊಂಡು ತಿಂದು,ತಿನಿಸಿ ಸಂಭ್ರಮ ಪಟ್ಟರು.

ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿಶ್ವನಾಥ ಹೊಳ್ಳ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಜಯಂತಿ ಪುರಂದರ್,ಕೇಂದ್ರ ಖಜಾಂಜಿ ವಾಸುದೇವ ಸೋಮಯಾಜಿ,ಮಹಿಳಾ ವೇದಿಕೆಯ ಅಧ್ಯಕ್ಷೆ ನಳಿನಿ ಹೊಳ್ಳ ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಇಂದಿರಾ ಹೊಳ್ಳ ಪ್ರಾರ್ಥನೆ ಹಾಡಿದರು.ಸುಜಾತ ರಾವ್ ಸ್ವಾಗತಿಸಿದರು,ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಅಡೂರ್ ನಿರೂಪಿಸಿದರು.ಗೀತಾ ವಿ ಸೋಮಯಾಜಿ ಆಟಿಯ ಮಹತ್ವವನ್ನ ವಿವರಿಸಿದರು.ಅಖಿಲ ಪ್ರಕಾಶ್ ನಾರಾಯಣ್ ಖಾದ್ಯಗಳನ್ನು ತಯಾರಿಸಿ ತಂದವರ ಪಟ್ಟಿಯನ್ನು ಓದಿ,ಆಶಾ ಅಡೂರ್ ವಂದಿಸಿದರು

ಹೆಚ್ಚಿನ ಸಂಖ್ಯೆಯಲ್ಲಿ ಕೂಟ ಮಹಾಜಗತ್ತಿನ ಪುರುಷರು, ಮಹಿಳೆಯರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

Related posts

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ಆರೋಪ, ಅಪಪ್ರಚಾರ ಮಾಡಿದ ಹಿನ್ನೆಲೆ: ಸುದ್ದಿ ಬಿಡುಗಡೆ ಪತ್ರಿಕೆಯ ಇಬ್ಬರ ಸದಸ್ಯತನ ಅಮಾನತು

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!