September 6, 2026
ಸಂಘ-ಸಂಸ್ಥೆಗಳು

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

ಬೆಳ್ತಂಗಡಿ:ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯ ವತಿಯಿಂದ ಆ.4 ರಂದು ಉಜಿರೆಯ ಅರಿಪಾಡಿ ಮಠದ ಕಲಾವೇದಿಕೆಯಲ್ಲಿ ಆಟಿಕೂಟವನ್ನು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿ ಕೂಟ ಮಹಾ ಜಗತ್ತಿನ ಅಧ್ಯಕ್ಷ ವಿಶ್ವನಾಥ ಹೊಳ್ಳರವರು ದೀಪ ಬೆಳಗಿಸಿ ಆಟಿಕೂಟಕ್ಕೆ ಚಾಲನೆ ನೀಡಿದರು.

ನಂತರ ಆಟಿಕೂಟದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.ಮಹಿಳಾ ವೇದಿಕೆಯ ಸದಸ್ಯರಾದಂತಹ ವಿದ್ಯಾಶ್ರೀ ಅಡೂರ್ ಅವರು ಸ್ಪರ್ಧೆಗಳನ್ನು ನಿರ್ವಹಿಸಿದರು. ಮಹಿಳಾ ವೇದಿಕೆಯ ಅನೇಕ ಸದಸ್ಯರು ತುಳುನಾಡಿನ ಖಾದ್ಯಗಳನ್ನು ತಮ್ಮ ತಮ್ಮ ಮನೆಗಳಲ್ಲಿ ತಯಾರಿಸಿ ತಂದು ಕಾರ್ಯಕ್ರಮದಲ್ಲಿ ಹಂಚಿಕೊಂಡು ತಿಂದು,ತಿನಿಸಿ ಸಂಭ್ರಮ ಪಟ್ಟರು.

ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿಶ್ವನಾಥ ಹೊಳ್ಳ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಜಯಂತಿ ಪುರಂದರ್,ಕೇಂದ್ರ ಖಜಾಂಜಿ ವಾಸುದೇವ ಸೋಮಯಾಜಿ,ಮಹಿಳಾ ವೇದಿಕೆಯ ಅಧ್ಯಕ್ಷೆ ನಳಿನಿ ಹೊಳ್ಳ ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಇಂದಿರಾ ಹೊಳ್ಳ ಪ್ರಾರ್ಥನೆ ಹಾಡಿದರು.ಸುಜಾತ ರಾವ್ ಸ್ವಾಗತಿಸಿದರು,ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಅಡೂರ್ ನಿರೂಪಿಸಿದರು.ಗೀತಾ ವಿ ಸೋಮಯಾಜಿ ಆಟಿಯ ಮಹತ್ವವನ್ನ ವಿವರಿಸಿದರು.ಅಖಿಲ ಪ್ರಕಾಶ್ ನಾರಾಯಣ್ ಖಾದ್ಯಗಳನ್ನು ತಯಾರಿಸಿ ತಂದವರ ಪಟ್ಟಿಯನ್ನು ಓದಿ,ಆಶಾ ಅಡೂರ್ ವಂದಿಸಿದರು

ಹೆಚ್ಚಿನ ಸಂಖ್ಯೆಯಲ್ಲಿ ಕೂಟ ಮಹಾಜಗತ್ತಿನ ಪುರುಷರು, ಮಹಿಳೆಯರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

Related posts

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ ‘ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ಕಲ್ಮಂಜ ಬ್ರಹ್ಮಶ್ರೀ ಯುವ ಬಿಲ್ಲವ ವೇದಿಕೆಯ ಮಾಸಿಕ ಸಭೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya
error: Content is protected !!