25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯವು ರಜತ ಸಂಭ್ರಮದ ಮೆರುಗನ್ನು ಅನುಭವಿಸುತ್ತಿರುವ ಈ ಸಂದರ್ಭದಲ್ಲಿ, ಅಪರೂಪದ ಒಂದು ಕಾರ್ಯಕ್ರಮ ಬೆಳ್ತಂಗಡಿ ಕಥೇಡ್ರಲ್ ಚರ್ಚ್‌ನಲ್ಲಿ ನಡೆಯಿತು. ಕಥೇಡ್ರಲ್ ಚರ್ಚ್‌ನಲ್ಲಿ ಧರ್ಮ ಪ್ರಾಂತ್ಯದ ರಜತ ಮಹೋತ್ಸವದ ವಂದನಾರ್ಪಣಾ ಬಲಿಪೂಜೆ ಸಂದರ್ಭದಲ್ಲಿ, ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಪರಮಪೂಜ್ಯ ಅತಿವಂದನೀಯ ಲಾರೆನ್ಸ್ ಮುಕ್ಕುಯಿ ಅವರ ಆಪ್ತ ಸಹಾಯಕ ಹಾಗೂ ನಿಷ್ಠಾವಂತ ವಾಹನ ಚಾಲಕರಾಗಿ 25 ವರ್ಷಗಳ ಸೇವೆ ಸಲ್ಲಿಸಿರುವ ಬೆಳ್ತಂಗಡಿ ಉದಯನಗರ ನಿವಾಸಿ ಬಿಜು ಪಾರಪ್ಪುರಮ್ ಅವರನ್ನು ಚರ್ಚ್ ವತಿಯಿಂದ ಸನ್ಮಾನಿಸಲಾಯಿತು.

ಬಿಜು ಅವರ ನಿಷ್ಠೆ, ಸೇವಾ ಮನೋಭಾವನೆ, ಶ್ರದ್ದೆ ಮತ್ತು ಕರ್ಮಕುಶಲತೆಯನ್ನು ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಪರಮಪೂಜ್ಯ ಲಾರೆನ್ಸ್ ಮುಕ್ಕುಯಿ ಬಣ್ಣಿಸಿ, ಅವರ ಸೇವೆಯನ್ನು ಪ್ರಶಂಸೆ ಮಾಡಿದರು.

ಈ ಸಂದರ್ಭದಲ್ಲಿ ಧರ್ಮಾಧ್ಯಕ್ಷರಾದ ಅತಿವಂದನೀಯ ಮಾರ್ ಲಾರೆನ್ಸ್ ಮುಕ್ಕುಯಿ, ಬೆಳ್ತಂಗಡಿ ಧರ್ಮ ಪ್ರಾಂತ್ಯದ ಚಾನ್ಸಲರ್ ವಂದನೀಯ ಫಾದರ್ ಲಾರೆನ್ಸ್ ಪೂಣೋಲಿಲ್, ಧರ್ಮಗುರುಗಳಾದ ವಂದನೀಯ ಫಾದರ್ ತೋಮಸ್ ಕಣ್ಣಾòಕಲ್, ಟ್ರಸ್ಟಿಗಳಾದ ಶ್ರೀ ರೆಜಿ ಜೋರ್ಜ್ ಪಡಂಗಡಿ, ಶ್ರೀ ಕ್ಲಿಪ್ಪಿ ನಂದಳತ್ತ್, ದೇವಸ್ಯ ಮೈಪಾನ್, ಮಾಮಚ್ಚನ್, ಶಿನು ಮುರಿಕ್ಕನಾನಿಕ್ಕಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!