September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯವು ರಜತ ಸಂಭ್ರಮದ ಮೆರುಗನ್ನು ಅನುಭವಿಸುತ್ತಿರುವ ಈ ಸಂದರ್ಭದಲ್ಲಿ, ಅಪರೂಪದ ಒಂದು ಕಾರ್ಯಕ್ರಮ ಬೆಳ್ತಂಗಡಿ ಕಥೇಡ್ರಲ್ ಚರ್ಚ್‌ನಲ್ಲಿ ನಡೆಯಿತು. ಕಥೇಡ್ರಲ್ ಚರ್ಚ್‌ನಲ್ಲಿ ಧರ್ಮ ಪ್ರಾಂತ್ಯದ ರಜತ ಮಹೋತ್ಸವದ ವಂದನಾರ್ಪಣಾ ಬಲಿಪೂಜೆ ಸಂದರ್ಭದಲ್ಲಿ, ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಪರಮಪೂಜ್ಯ ಅತಿವಂದನೀಯ ಲಾರೆನ್ಸ್ ಮುಕ್ಕುಯಿ ಅವರ ಆಪ್ತ ಸಹಾಯಕ ಹಾಗೂ ನಿಷ್ಠಾವಂತ ವಾಹನ ಚಾಲಕರಾಗಿ 25 ವರ್ಷಗಳ ಸೇವೆ ಸಲ್ಲಿಸಿರುವ ಬೆಳ್ತಂಗಡಿ ಉದಯನಗರ ನಿವಾಸಿ ಬಿಜು ಪಾರಪ್ಪುರಮ್ ಅವರನ್ನು ಚರ್ಚ್ ವತಿಯಿಂದ ಸನ್ಮಾನಿಸಲಾಯಿತು.

ಬಿಜು ಅವರ ನಿಷ್ಠೆ, ಸೇವಾ ಮನೋಭಾವನೆ, ಶ್ರದ್ದೆ ಮತ್ತು ಕರ್ಮಕುಶಲತೆಯನ್ನು ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಪರಮಪೂಜ್ಯ ಲಾರೆನ್ಸ್ ಮುಕ್ಕುಯಿ ಬಣ್ಣಿಸಿ, ಅವರ ಸೇವೆಯನ್ನು ಪ್ರಶಂಸೆ ಮಾಡಿದರು.

ಈ ಸಂದರ್ಭದಲ್ಲಿ ಧರ್ಮಾಧ್ಯಕ್ಷರಾದ ಅತಿವಂದನೀಯ ಮಾರ್ ಲಾರೆನ್ಸ್ ಮುಕ್ಕುಯಿ, ಬೆಳ್ತಂಗಡಿ ಧರ್ಮ ಪ್ರಾಂತ್ಯದ ಚಾನ್ಸಲರ್ ವಂದನೀಯ ಫಾದರ್ ಲಾರೆನ್ಸ್ ಪೂಣೋಲಿಲ್, ಧರ್ಮಗುರುಗಳಾದ ವಂದನೀಯ ಫಾದರ್ ತೋಮಸ್ ಕಣ್ಣಾòಕಲ್, ಟ್ರಸ್ಟಿಗಳಾದ ಶ್ರೀ ರೆಜಿ ಜೋರ್ಜ್ ಪಡಂಗಡಿ, ಶ್ರೀ ಕ್ಲಿಪ್ಪಿ ನಂದಳತ್ತ್, ದೇವಸ್ಯ ಮೈಪಾನ್, ಮಾಮಚ್ಚನ್, ಶಿನು ಮುರಿಕ್ಕನಾನಿಕ್ಕಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Related posts

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya
error: Content is protected !!