ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

ಗುರುವಾಯನಕೆರೆ: 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ ವಿಸ್ಮಯ ಮತ್ತು ಕುತೂಹಲ’ ಎಂಬ ಶೀರ್ಷಿಕೆಯಡಿಯಲ್ಲಿ ಆ.15 ರ ಬೆಳಗ್ಗೆ ೧೧.೩೦ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.

ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿದ್ದು, ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿದೆ. ಸಾಂಪ್ರದಾಯಿಕ ಪಾಠ – ಪ್ರವಚನ ಮತ್ತು ಪರೀಕ್ಷಾ ಪದ್ದತಿಗಿಂತ ವಿಭಿನ್ನವಾಗಿ ಅಲೋಚಿಸುವ ಪ್ರಯತ್ನ ಇದಾಗಿದೆ.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರತಾಪ್ ದೊಡ್ಡಮನೆ ಇವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಲಿದ್ದಾರೆ. ಈ ಅಪರೂಪದ ಕಾರ್ಯಗಾರಕ್ಕೆ ಆಸಕ್ತ ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರು ತಿಳಿಸಿದ್ದಾರೆ.

ಭಾಗವಹಿಸಲು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ : 7618718791  9483942186

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮೈಟ್ ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್‌ ವಿನ್ಯಾಸ ಕಾರ್ಯಾಗಾರ

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya
error: Content is protected !!