24.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

ಉಜಿರೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆ.20 ರಂದು ಉಜಿರೆಯಲ್ಲಿ ಶಾರದಾ ಮಂಟಪದಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ನಡೆಯಲಿದ್ದು ಪೂರ್ವಸಿದ್ಧತೆಗಳ ಬಗ್ಯೆ ಸಮಾಲೋಚನಾ ಸಭೆಯು ಆ. 3ರಂದು ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಸಮಾವೇಶದ ಬಗ್ಯೆ ಸವಿವರ ಮಾಹಿತಿ ನೀಡಿ ವಿವಿಧ ಊರುಗಳಿಗೆ ವಿಭಾಗ ಸಂಘಟಕರನ್ನು ಆಯ್ಕೆ ಮಾಡಲಾಯಿತು. ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ, ಮಡಂತ್ಯಾರು, ನಾರಾವಿ, ನಿಡ್ಲೆ, ಗುರುವಾಯನಕೆರೆ ವಲಯಗಳಿಗೆ ತಲಾ ನಾಲ್ಕು ಮಂದಿಯAತೆ ಸಂಘಟಕರನ್ನು ಆಯ್ಕೆ ಮಾಡಿ ನಿವೃತ್ತರ ಸದಸ್ಯತ್ವ ನೋಂದಣಿಗೆ ಸಹಕರಿಸುವಂತೆ ಕೋರಲಾಯಿತು.


ಸಂಘದ ಕಾರ್ಯದರ್ಶಿ ವಿಶ್ವಾಸ ರಾವ್ ವರದಿ ವಾಚಿಸಿದರು. ವಸಂತ ಸುವರ್ಣ ಪಿಂಚಣಿ ಬಗ್ಯೆ ಮಾಹಿತಿ ನೀಡಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಲೆಕ್ಕಪತ್ರದ ವಿವರ ನೀಡಿದರು.


ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಕುಸುಮಾವತಿ ಧನ್ಯವಾದವಿತ್ತರು.

Related posts

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya
error: Content is protected !!