25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

ಬೆಳ್ತಂಗಡಿ: ಉಸ್ಮಾನ್ ಗರ್ಡಾಡಿಯವರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಪ್ರಮುಖ ಅಗ್ನಿಶಾಮಕ (ಲೀಡಿಂಗ್ ಫೈರ್‌ಮ್ಯಾನ್) ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿಗೊಂಡಿರುತ್ತಾರೆ.


ಇವರು 2005 ರಲ್ಲಿ ನೇರ ನೇಮಕಾತಿ ಮೂಲಕ ಇಲಾಖೆಗೆ ಸೇರ್ಪಡೆಗೊಂಡಿದ್ದು, ಶಿವಮೊಗ್ಗದಲ್ಲಿ ಇಲಾಖಾ ತರಬೇತಿ ಪಡೆದ ಬಳಿಕ ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ವರ್ಷ ಬಂಟ್ವಾಳ ಅಗ್ನಿಶಾಮಕ ಠಾಣೆಗೆ ವರ್ಗಾವಣೆಗೊಂಡಿದ್ದು, ಇದೀಗ ಪದೋನ್ನತಿ ಹೊಂದಿ ಮತ್ತೆ ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಆಗಮಿಸಿರುತ್ತಾರೆ.

ಇವರು ಇಲಾಖೆಯಲ್ಲಿ ಸಲ್ಲಿಸಿದ ಸೇವೆಗಾಗಿ 2021ನೇ ಸಾಲಿನ ಮಾನ್ಯ ಮುಖ್ಯಮಂತ್ರಿಯವರ ಚಿನ್ನದ ಪದಕಕ್ಕೆ ಭಾಜನರಾಗಿದ್ದು, ಅಗ್ನಿಶಮನ ಹಾಗೂ ರಕ್ಷಣಾ ಕಾರ್ಯದಲ್ಲಿ ಸಹಕರಿಸುವುದರೊಂದಿಗೆ ಜನರಲ್ಲಿ ಅಗ್ನಿ ಅನಾಹುತಗಳ ಹಾಗೂ ಇತರ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿಯೂ ಕೆಲಸ ನಿರ್ವಹಿಸುತ್ತಾರೆ. ಸಾರ್ವಜನಿಕರೊಡನೆ ಉತ್ತಮ ಸಂಪರ್ಕ ಸಂವಹನ ಹೊಂದಿರುವ ಇವರು ತಾಲೂಕಿನ ಗರ್ಡಾಡಿ ಗ್ರಾಮದ ನಿವಾಸಿಯಾಗಿರುತ್ತಾರೆ.

Related posts

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಪಡಂದಡ್ಕ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಚರಂಡಿ ದುರಸ್ತಿಗೆ ಎಸ್.ಡಿ.ಪಿ.ಐ ಮನವಿ

Suddi Udaya

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!