22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾಭಿವೃದ್ದಿ ವಿಭಾಗದ ವಿಸ್ತೃತ ಚಟುವಟಿಕೆಯ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕೇಂದ್ರ ಸರ್ಕಾರದ ಬಜೆಟ್ ಮೇಲಿನ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ ನಡೆಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾಭಿವೃದ್ದಿ ವಿಭಾಗದ ಮುಖ್ಯಸ್ಥ ಡಾ. ಗಣರಾಜ್. ಕೆ ಅವರು ಕೇಂದ್ರ ಬಜೆಟಿನ ಮುಖ್ಯಾಂಶಗಳ ಬಗ್ಗೆ ವಿಸ್ತೃತವಾಗಿ ತಿಳಿಸಿದರು.

ತೃತೀಯ ಬಿ.ಎ ವಿದ್ಯಾರ್ಥಿಗಳಾದ ಸಿಂಚನಾ ಭಾರತೀ , ಸಮೀರ್ ಹಾಗೂ ಶ್ರಾವ್ಯಾ ಅವರು ಬಜೆಟ್ ನಲ್ಲಿ ಪ್ರಸ್ತಾಪಿತ ಶೈಕ್ಷಣಿಕ , ಉದ್ಯೋಗ ಹಾಗೂ ಕೌಶಲ್ಯ , ತಂತ್ರಜ್ಞಾನ , ಉದ್ಯೋಗ , ಕೃಷಿ , ಕೈಗಾರಿಕೆ ಇತ್ಯಾದಿ ಪ್ರಮುಖ ಅಂಶಗಳ ಬಗ್ಗೆ ಬೆಳಕು ಚೆಲ್ಲಿದರು. ವಿದ್ಯಾರ್ಥಿಗಳಿಂದ ಚರ್ಚೆ ಕೂಡ ನಡೆಯಿತು.

ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ರಾ. ಸೇ ಯೋಜನೆಯ ಸಹ ಯೋಜನಾಧಿಕಾರಿ ಹಾಗೂ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಪದ್ಮಶ್ರೀ ರಕ್ಷಿತ್ ಅವರು ಸ್ವಾಗತಿಸಿ ನಿರೂಪಿಸಿದರು.

Related posts

ಹಿರಿಯರ ಚಿಂತನ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya
error: Content is protected !!