31.8 C
ಪುತ್ತೂರು, ಬೆಳ್ತಂಗಡಿ
May 18, 2025
ಸಂಘ-ಸಂಸ್ಥೆಗಳು

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

ಬೆಳ್ತಂಗಡಿ:ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯ ವತಿಯಿಂದ ಆ.4 ರಂದು ಉಜಿರೆಯ ಅರಿಪಾಡಿ ಮಠದ ಕಲಾವೇದಿಕೆಯಲ್ಲಿ ಆಟಿಕೂಟವನ್ನು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿ ಕೂಟ ಮಹಾ ಜಗತ್ತಿನ ಅಧ್ಯಕ್ಷ ವಿಶ್ವನಾಥ ಹೊಳ್ಳರವರು ದೀಪ ಬೆಳಗಿಸಿ ಆಟಿಕೂಟಕ್ಕೆ ಚಾಲನೆ ನೀಡಿದರು.

ನಂತರ ಆಟಿಕೂಟದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.ಮಹಿಳಾ ವೇದಿಕೆಯ ಸದಸ್ಯರಾದಂತಹ ವಿದ್ಯಾಶ್ರೀ ಅಡೂರ್ ಅವರು ಸ್ಪರ್ಧೆಗಳನ್ನು ನಿರ್ವಹಿಸಿದರು. ಮಹಿಳಾ ವೇದಿಕೆಯ ಅನೇಕ ಸದಸ್ಯರು ತುಳುನಾಡಿನ ಖಾದ್ಯಗಳನ್ನು ತಮ್ಮ ತಮ್ಮ ಮನೆಗಳಲ್ಲಿ ತಯಾರಿಸಿ ತಂದು ಕಾರ್ಯಕ್ರಮದಲ್ಲಿ ಹಂಚಿಕೊಂಡು ತಿಂದು,ತಿನಿಸಿ ಸಂಭ್ರಮ ಪಟ್ಟರು.

ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿಶ್ವನಾಥ ಹೊಳ್ಳ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಜಯಂತಿ ಪುರಂದರ್,ಕೇಂದ್ರ ಖಜಾಂಜಿ ವಾಸುದೇವ ಸೋಮಯಾಜಿ,ಮಹಿಳಾ ವೇದಿಕೆಯ ಅಧ್ಯಕ್ಷೆ ನಳಿನಿ ಹೊಳ್ಳ ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಇಂದಿರಾ ಹೊಳ್ಳ ಪ್ರಾರ್ಥನೆ ಹಾಡಿದರು.ಸುಜಾತ ರಾವ್ ಸ್ವಾಗತಿಸಿದರು,ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಅಡೂರ್ ನಿರೂಪಿಸಿದರು.ಗೀತಾ ವಿ ಸೋಮಯಾಜಿ ಆಟಿಯ ಮಹತ್ವವನ್ನ ವಿವರಿಸಿದರು.ಅಖಿಲ ಪ್ರಕಾಶ್ ನಾರಾಯಣ್ ಖಾದ್ಯಗಳನ್ನು ತಯಾರಿಸಿ ತಂದವರ ಪಟ್ಟಿಯನ್ನು ಓದಿ,ಆಶಾ ಅಡೂರ್ ವಂದಿಸಿದರು

ಹೆಚ್ಚಿನ ಸಂಖ್ಯೆಯಲ್ಲಿ ಕೂಟ ಮಹಾಜಗತ್ತಿನ ಪುರುಷರು, ಮಹಿಳೆಯರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

Related posts

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya
error: Content is protected !!