23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

ಬೆಳ್ತಂಗಡಿ:ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯ ವತಿಯಿಂದ ಆ.4 ರಂದು ಉಜಿರೆಯ ಅರಿಪಾಡಿ ಮಠದ ಕಲಾವೇದಿಕೆಯಲ್ಲಿ ಆಟಿಕೂಟವನ್ನು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿ ಕೂಟ ಮಹಾ ಜಗತ್ತಿನ ಅಧ್ಯಕ್ಷ ವಿಶ್ವನಾಥ ಹೊಳ್ಳರವರು ದೀಪ ಬೆಳಗಿಸಿ ಆಟಿಕೂಟಕ್ಕೆ ಚಾಲನೆ ನೀಡಿದರು.

ನಂತರ ಆಟಿಕೂಟದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.ಮಹಿಳಾ ವೇದಿಕೆಯ ಸದಸ್ಯರಾದಂತಹ ವಿದ್ಯಾಶ್ರೀ ಅಡೂರ್ ಅವರು ಸ್ಪರ್ಧೆಗಳನ್ನು ನಿರ್ವಹಿಸಿದರು. ಮಹಿಳಾ ವೇದಿಕೆಯ ಅನೇಕ ಸದಸ್ಯರು ತುಳುನಾಡಿನ ಖಾದ್ಯಗಳನ್ನು ತಮ್ಮ ತಮ್ಮ ಮನೆಗಳಲ್ಲಿ ತಯಾರಿಸಿ ತಂದು ಕಾರ್ಯಕ್ರಮದಲ್ಲಿ ಹಂಚಿಕೊಂಡು ತಿಂದು,ತಿನಿಸಿ ಸಂಭ್ರಮ ಪಟ್ಟರು.

ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿಶ್ವನಾಥ ಹೊಳ್ಳ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಜಯಂತಿ ಪುರಂದರ್,ಕೇಂದ್ರ ಖಜಾಂಜಿ ವಾಸುದೇವ ಸೋಮಯಾಜಿ,ಮಹಿಳಾ ವೇದಿಕೆಯ ಅಧ್ಯಕ್ಷೆ ನಳಿನಿ ಹೊಳ್ಳ ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಇಂದಿರಾ ಹೊಳ್ಳ ಪ್ರಾರ್ಥನೆ ಹಾಡಿದರು.ಸುಜಾತ ರಾವ್ ಸ್ವಾಗತಿಸಿದರು,ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಅಡೂರ್ ನಿರೂಪಿಸಿದರು. ಗೀತಾ ವಿ ರಾವ್ ಆಟಿಯ ಮಹತ್ವವನ್ನ ವಿವರಿಸಿದರು.ಅಖಿಲ ಪ್ರಕಾಶ್ ನಾರಾಯಣ್ ಖಾದ್ಯಗಳನ್ನು ತಯಾರಿಸಿ ತಂದವರ ಪಟ್ಟಿಯನ್ನು ಓದಿ,ಆಶಾ ಅಡೂರ್ ವಂದಿಸಿದರು

ಹೆಚ್ಚಿನ ಸಂಖ್ಯೆಯಲ್ಲಿ ಕೂಟ ಮಹಾಜಗತ್ತಿನ ಪುರುಷರು, ಮಹಿಳೆಯರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

Related posts

ಭಾರಿ ಮಳೆ: ಆ.30ರಂದು ದ.ಕ.ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya
error: Content is protected !!