22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಆ.3 ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಶಿಕ್ಷಕ ವೃಂದದವರು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭವಾಯಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಕ್ಕಳಿಗೆ ತಂದೆ, ತಾಯಿ ಮತ್ತು ಗುರು ಇವರೆಲ್ಲರೂ ಪ್ರಮುಖವಾದವರು, ನಿಮ್ಮ ವಿಶ್ವಾಸವನ್ನು ನಮ್ಮ ಕೈಲಾದಷ್ಟು ಮಟ್ಟಿಗೆ ನೆರವೇರಿಸುತ್ತೇವೆ ಎಂದು ಭರವಸೆಯನ್ನು ನೀಡಿ, ಮಕ್ಕಳಿಗೆ ಪರಸ್ಪರ ಪ್ರೀತಿಸುವ, ಗೌರವಿಸುವ ತರಬೇತಿಯನ್ನು ಹೆತ್ತವರು ನೀಡಬೇಕೆಂದು ಹೇಳಿದರು.

ಸಭೆಗೆ ಸಂಪನ್ಮೂಲ ವ್ಯಕ್ತಿಗಳಾಗಿ ಸಹ ಪ್ರಾಧ್ಯಾಪಕರು, ಮಕ್ಕಳ ವಿಭಾಗ ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿಯ ಡಾ| ಚಂದನಾ ಪೈರವರು ಆಗಮಿಸಿ “ಮಕ್ಕಳ ಆರೋಗ್ಯ, ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ” ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು. ಶ್ರೀಮತಿ ಟ್ರೆಸ್ಸಿ ಲೋಬೋ ರವರು ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ಸಭೆಗೆ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೋ ಡೇಸರವರು ಶಾಲಾ ನಿಯಮಗಳು ಹಾಗೂ ಹೆತ್ತವರ ಸಲಹೆ ಸೂಚನೆಗಳಿಗೆ ಉತ್ತರವನ್ನು ನೀಡಿದರು.

ಶಿಕ್ಷಕ-ರಕ್ಷಕ ಎಲ್ಲಾ ಮಾಜಿ ಪದಾಧಿಕಾರಿಗಳಿಗೆ ಗಿಡವನ್ನು ನೀಡುವುದರ ಮೂಲಕ ಧನ್ಯವಾದಗಳನ್ನು ಅರ್ಪಿಸಲಾಯಿತು. 2024-25ನೇ ಶೈಕ್ಷಣಿಕ ಸಾಲಿನ ಪದಾಧಿಕಾರಿಗಳ ಚುನಾವಣೆಯನ್ನು ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೋ ಡೇಸರವರು ನೆರವೇರಿಸಿ ನಂತರ ದೀಪ ಬೆಳಗಿಸುವುದರ ಮೂಲಕ 2024-25 ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷರಕ್ಷಕ ಸಂಘವನ್ನು ಉದ್ಘಾಟಿಸಲಾಯಿತು. ಎರಡನೇ ಬಾರಿಗೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ವಿನಯ್ ಡಿಸೋಜ ರವರು ಮಾತನಾಡಿ ಶಾಲೆಯ ಏಳಿಗೆಗೆ ಶ್ರಮಿಸುವುದಾಗಿ ಭರವಸೆಯನ್ನಿತ್ತರು. ನೂತನವಾಗಿ ನೇಮಕಗೊಂಡ ಎಲ್ಲಾ ಪದಾಧಿಕಾರಿಗಳಿಗೆ ಗಿಡವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಶಾಲಾ ಸಹಶಿಕ್ಷಕಿಯರಾದ ಶ್ರೀಮತಿ ರಮ್ಯಾಲತಾ ಮತ್ತು ಶೀಮತಿ ಸವಿತಾ ರವರು ಶೈಕ್ಷಣಿಕ ವರ್ಷದ ಸಭೆಯ ವರದಿಯನ್ನು ಮಂಡಿಸಿದರು. ಸಹ ಶಿಕ್ಷಕಿಯಾದ ಶೀಮತಿ ಎಲಿಜಾ ಶಾಂತಿರವರು ಶೈಕ್ಷಣಿಕ ಸಾಲಿನ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಸಹ ಶಿಕ್ಷಕಿಯರಾದ ಶ್ರೀಮತಿ ಐಡ ಡಿಕುನ್ಹಾ ಮತ್ತು ಶ್ರೀಮತಿ ಮಮತಾರವರು ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀಮತಿ ವಿನ್ನಿ ಲೋಬೋ ರವರು ಸ್ವಾಗತಿಸಿ, ಕುಮಾರಿ ಜುವರಿಯರವರು ಧನ್ಯವಾದವನ್ನು ಸಮರ್ಪಿಸಿದರು.

Related posts

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya
error: Content is protected !!