September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯವು ರಜತ ಸಂಭ್ರಮದ ಮೆರುಗನ್ನು ಅನುಭವಿಸುತ್ತಿರುವ ಈ ಸಂದರ್ಭದಲ್ಲಿ, ಅಪರೂಪದ ಒಂದು ಕಾರ್ಯಕ್ರಮ ಬೆಳ್ತಂಗಡಿ ಕಥೇಡ್ರಲ್ ಚರ್ಚ್‌ನಲ್ಲಿ ನಡೆಯಿತು. ಕಥೇಡ್ರಲ್ ಚರ್ಚ್‌ನಲ್ಲಿ ಧರ್ಮ ಪ್ರಾಂತ್ಯದ ರಜತ ಮಹೋತ್ಸವದ ವಂದನಾರ್ಪಣಾ ಬಲಿಪೂಜೆ ಸಂದರ್ಭದಲ್ಲಿ, ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಪರಮಪೂಜ್ಯ ಅತಿವಂದನೀಯ ಲಾರೆನ್ಸ್ ಮುಕ್ಕುಯಿ ಅವರ ಆಪ್ತ ಸಹಾಯಕ ಹಾಗೂ ನಿಷ್ಠಾವಂತ ವಾಹನ ಚಾಲಕರಾಗಿ 25 ವರ್ಷಗಳ ಸೇವೆ ಸಲ್ಲಿಸಿರುವ ಬೆಳ್ತಂಗಡಿ ಉದಯನಗರ ನಿವಾಸಿ ಬಿಜು ಪಾರಪ್ಪುರಮ್ ಅವರನ್ನು ಚರ್ಚ್ ವತಿಯಿಂದ ಸನ್ಮಾನಿಸಲಾಯಿತು.

ಬಿಜು ಅವರ ನಿಷ್ಠೆ, ಸೇವಾ ಮನೋಭಾವನೆ, ಶ್ರದ್ದೆ ಮತ್ತು ಕರ್ಮಕುಶಲತೆಯನ್ನು ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಪರಮಪೂಜ್ಯ ಲಾರೆನ್ಸ್ ಮುಕ್ಕುಯಿ ಬಣ್ಣಿಸಿ, ಅವರ ಸೇವೆಯನ್ನು ಪ್ರಶಂಸೆ ಮಾಡಿದರು.

ಈ ಸಂದರ್ಭದಲ್ಲಿ ಧರ್ಮಾಧ್ಯಕ್ಷರಾದ ಅತಿವಂದನೀಯ ಮಾರ್ ಲಾರೆನ್ಸ್ ಮುಕ್ಕುಯಿ, ಬೆಳ್ತಂಗಡಿ ಧರ್ಮ ಪ್ರಾಂತ್ಯದ ಚಾನ್ಸಲರ್ ವಂದನೀಯ ಫಾದರ್ ಲಾರೆನ್ಸ್ ಪೂಣೋಲಿಲ್, ಧರ್ಮಗುರುಗಳಾದ ವಂದನೀಯ ಫಾದರ್ ತೋಮಸ್ ಕಣ್ಣಾòಕಲ್, ಟ್ರಸ್ಟಿಗಳಾದ ಶ್ರೀ ರೆಜಿ ಜೋರ್ಜ್ ಪಡಂಗಡಿ, ಶ್ರೀ ಕ್ಲಿಪ್ಪಿ ನಂದಳತ್ತ್, ದೇವಸ್ಯ ಮೈಪಾನ್, ಮಾಮಚ್ಚನ್, ಶಿನು ಮುರಿಕ್ಕನಾನಿಕ್ಕಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Related posts

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

Suddi Udaya

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

Suddi Udaya
error: Content is protected !!