July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

ಉಜಿರೆ: ಧರ್ಮಸ್ಥಳದ ಶಾಂತಿವನಟ್ರಸ್ಟ್ ಆಶ್ರಯದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಆಯೋಜಿಸಿದ ಇಪ್ಪತ್ತೊಂದನೆ ವರ್ಷದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ ಆ. 10 ರಂದು ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಪೂರ್ವಾಹ್ನ ಗಂಟೆ 10.30 ರಿಂದ ನಡೆಯಲಿದೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಶಶಿಕಾಂತ್ ಜೈನ್ ತಿಳಿಸಿದ್ದಾರೆ.


ಚಲನಚಿತ್ರ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಬಹುಮಾನ ವಿತರಿಸುವರು.
ಶಾಂತಿವನ ಟ್ರಸ್ಟ್ ವತಿಯಿಂದ ಪ್ರಕಟಿಸಲಾದ “ಜ್ಞಾನದರ್ಶಿನಿ” ಮತ್ತು “ಜ್ಞಾನವರ್ಷಿನಿ” ಎಂಬ ಮೂವತ್ತನೆ ವರ್ಷದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಹಾವೇರಿಯ ಹುಕ್ಕೇರಿ ಮಠದ ನಿರಂಜನ ಪ್ರಣವ ಸ್ವರೂಪಿ ಸದಾಶಿವ ಮಹಾಸ್ವಾಮೀಜಿ ಲೋಕಾರ್ಪಣೆ ಮಾಡುವರು.


ದಕ್ಷಿಣಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ ಶುಭಾಶಂಸನೆ ಮಾಡುವರು.
ಧಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.
ಮಂಗಳೂರಿನ ಸನಾತನ ನಾಟ್ಯಾಲಯದ ಕಲಾವಿದರಿಂದ ಗಾಯನ ಮತ್ತು ನೃತ್ಯ ಹಾಗೂ ದಾವಣಗೆರೆಯ ಖ್ಯಾತ ಕಲಾವಿದ ಶಾಂತಯ್ಯ ಪರಡಿಮಠ ಅವರಿಂದ ಕುಂಚಕಲಾ ಪ್ರದರ್ಶನ ನಡೆಯಲಿದೆ.

Related posts

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಭಜನಾ ಪರಿಷತ್ತಿನ ತಾಲೂಕು ಹಾಗೂ ವಲಯ ಪದಾಧಿಕಾರಿಗಳ ಸಭೆ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ಅಕ್ಷರ ಜ್ಞಾನ ಶಿಬಿರ ಸಂಪನ್ನ

Suddi Udaya
error: Content is protected !!