25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

ಗುರುವಾಯನಕೆರೆ: 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ ವಿಸ್ಮಯ ಮತ್ತು ಕುತೂಹಲ’ ಎಂಬ ಶೀರ್ಷಿಕೆಯಡಿಯಲ್ಲಿ ಆ.15 ರ ಬೆಳಗ್ಗೆ ೧೧.೩೦ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.

ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿದ್ದು, ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿದೆ. ಸಾಂಪ್ರದಾಯಿಕ ಪಾಠ – ಪ್ರವಚನ ಮತ್ತು ಪರೀಕ್ಷಾ ಪದ್ದತಿಗಿಂತ ವಿಭಿನ್ನವಾಗಿ ಅಲೋಚಿಸುವ ಪ್ರಯತ್ನ ಇದಾಗಿದೆ.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರತಾಪ್ ದೊಡ್ಡಮನೆ ಇವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಲಿದ್ದಾರೆ. ಈ ಅಪರೂಪದ ಕಾರ್ಯಗಾರಕ್ಕೆ ಆಸಕ್ತ ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರು ತಿಳಿಸಿದ್ದಾರೆ.

ಭಾಗವಹಿಸಲು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ : 7618718791  9483942186

Related posts

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya
error: Content is protected !!