September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

ಉಜಿರೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆ.20 ರಂದು ಉಜಿರೆಯಲ್ಲಿ ಶಾರದಾ ಮಂಟಪದಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ನಡೆಯಲಿದ್ದು ಪೂರ್ವಸಿದ್ಧತೆಗಳ ಬಗ್ಯೆ ಸಮಾಲೋಚನಾ ಸಭೆಯು ಆ. 3ರಂದು ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಸಮಾವೇಶದ ಬಗ್ಯೆ ಸವಿವರ ಮಾಹಿತಿ ನೀಡಿ ವಿವಿಧ ಊರುಗಳಿಗೆ ವಿಭಾಗ ಸಂಘಟಕರನ್ನು ಆಯ್ಕೆ ಮಾಡಲಾಯಿತು. ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ, ಮಡಂತ್ಯಾರು, ನಾರಾವಿ, ನಿಡ್ಲೆ, ಗುರುವಾಯನಕೆರೆ ವಲಯಗಳಿಗೆ ತಲಾ ನಾಲ್ಕು ಮಂದಿಯAತೆ ಸಂಘಟಕರನ್ನು ಆಯ್ಕೆ ಮಾಡಿ ನಿವೃತ್ತರ ಸದಸ್ಯತ್ವ ನೋಂದಣಿಗೆ ಸಹಕರಿಸುವಂತೆ ಕೋರಲಾಯಿತು.


ಸಂಘದ ಕಾರ್ಯದರ್ಶಿ ವಿಶ್ವಾಸ ರಾವ್ ವರದಿ ವಾಚಿಸಿದರು. ವಸಂತ ಸುವರ್ಣ ಪಿಂಚಣಿ ಬಗ್ಯೆ ಮಾಹಿತಿ ನೀಡಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಲೆಕ್ಕಪತ್ರದ ವಿವರ ನೀಡಿದರು.


ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಕುಸುಮಾವತಿ ಧನ್ಯವಾದವಿತ್ತರು.

Related posts

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya

ಗುರುವಾಯನಕೆರೆ: ವರಕಬೆ ಬಳಿ ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ

Suddi Udaya
error: Content is protected !!