22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

ಉಜಿರೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆ.20 ರಂದು ಉಜಿರೆಯಲ್ಲಿ ಶಾರದಾ ಮಂಟಪದಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ನಡೆಯಲಿದ್ದು ಪೂರ್ವಸಿದ್ಧತೆಗಳ ಬಗ್ಯೆ ಸಮಾಲೋಚನಾ ಸಭೆಯು ಆ. 3ರಂದು ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಸಮಾವೇಶದ ಬಗ್ಯೆ ಸವಿವರ ಮಾಹಿತಿ ನೀಡಿ ವಿವಿಧ ಊರುಗಳಿಗೆ ವಿಭಾಗ ಸಂಘಟಕರನ್ನು ಆಯ್ಕೆ ಮಾಡಲಾಯಿತು. ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ, ಮಡಂತ್ಯಾರು, ನಾರಾವಿ, ನಿಡ್ಲೆ, ಗುರುವಾಯನಕೆರೆ ವಲಯಗಳಿಗೆ ತಲಾ ನಾಲ್ಕು ಮಂದಿಯAತೆ ಸಂಘಟಕರನ್ನು ಆಯ್ಕೆ ಮಾಡಿ ನಿವೃತ್ತರ ಸದಸ್ಯತ್ವ ನೋಂದಣಿಗೆ ಸಹಕರಿಸುವಂತೆ ಕೋರಲಾಯಿತು.


ಸಂಘದ ಕಾರ್ಯದರ್ಶಿ ವಿಶ್ವಾಸ ರಾವ್ ವರದಿ ವಾಚಿಸಿದರು. ವಸಂತ ಸುವರ್ಣ ಪಿಂಚಣಿ ಬಗ್ಯೆ ಮಾಹಿತಿ ನೀಡಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಲೆಕ್ಕಪತ್ರದ ವಿವರ ನೀಡಿದರು.


ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಕುಸುಮಾವತಿ ಧನ್ಯವಾದವಿತ್ತರು.

Related posts

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!