25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

ಉಜಿರೆ: ತುಳುನಾಡಿನ ಪ್ರಾದೇಶಿಕ ವಿಶೇಷತೆಗಳಲ್ಲಿ ಆಟಿ ಆಚರಣೆಯೂ ಒಂದಾಗಿದೆ. ಪ್ರಕೃತಿಯ  ಸಸ್ಯಮೂಲಗಳು  ದೇಹದ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.  ಶರೀರದ ರೋಗ ರುಜಿನಗಳಿಗೆ  ಆಟಿ ಕಷಾಯದಂತಹ  ಔಷಧೀಯ  ಸೇವನೆ ವೈಜ್ಞಾನಿಕವಾಗಿಯೂ ಆರೋಗ್ಯವರ್ಧಕ . ಶರೀರಕ್ಕೆ ಅಂಟಿಕೊಂಡ ವ್ಯಾಧಿಗೆ ಮಾನಸಿಕ ಚೈತನ್ಯ  ನೀಡುವ  ಔಷಧೀಯ ಗುಣ  ಆಟಿ ಆಚರಣೆಯ  ಆಹಾರ ಸೇವನೆ, ಆಚರಣೆಯಲ್ಲಿದೆ. ಪರಂಪರೆಯ ಹಳ್ಳಿ ಸೊಗಡಿನ  ಹಿರಿಯರ ಜ್ಞಾನವನ್ನು ಮರೆಯದೆ  ನಮ್ಮ ಬದುಕನ್ನು ಆರೋಗ್ಯಪೂರ್ಣವಾಗಿ  ಉಳಿಸಿ ಮುಂದಿನ ಪೀಳಿಗೆಗೆ  ತಿಳಿಸಿ ಹೇಳಬೇಕಾಗಿದೆ ಎಂದು ಉಜಿರೆ ಎಸ್ ಡಿ.ಎಂ.ಕಾಲೇಜಿನ ಕನ್ನಡ ಉಪನ್ಯಾಸಕ ಡಾ!ದಿವ ಕೊಕ್ಕಡ ಹೇಳಿದರು.                                         

ಅವರು  ಆ.3  ರಂದು ಉಜಿರೆಯ ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ  ಶ್ರೀ ಧ .ಮಂ .ಶಿಕ್ಷಕರ ತರಬೇತಿ ಸಂಸ್ಥೆ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್  ಸಹಯೋಗದೊಂದಿಗೆ ನಡೆದ “ಆಟಿದ ಅಟಿಲ್”  ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಯಾಗಿ  ಆಟಿ ಆಚರಣೆಯ ಮಹತ್ವ ತಿಳಿಸಿದರು.  ತುಳುನಾಡಿನ ಪ್ರಾಚೀನ ಜೀವನ ಪದ್ಧತಿಯನ್ನು ನಾವು ಮರೆತಿದ್ದೇವೆ. ತುಳುವರು ವಿಶೇಷ ಜ್ಞಾನ ಸಂಪನ್ನರು.   ಆಟಿ ಅಮಾವಾಸ್ಯೆಯಂದು  ಹಾಲೆ  ಮರದ ತೊಗಟೆಯ  ಕಷಾಯ  ಸೇವನೆ   ವೈಜ್ಞಾನಿಕವಾಗಿಯೂ ನಂಜು ನಿವಾರಕ.   ಅಂದು ಕೃಷಿಯ ಗದ್ದೆಗೆ  ಕಾಪು ಇಡುವ ಪದ್ಧತಿ, ಮರಕೆಸುವಿನ ಪತ್ರೊಡೆ ಸೇವನೆ, ಆಟಿ  ತೀರ್ಥ ಸ್ನಾನ, ಮಾರಿ ಓಡಿಸುವ ಆಟಿ ಕಳಂಜ ಮೊದಲಾದ ಪ್ರಾದೇಶಿಕ ಜಾನಪದೀಯ  ಆಚರಣೆಯ ಮಹತ್ವ ಅರಿತು  ಮುಂದಿನ ಪೀಳಿಗೆಗೆ ಅದನ್ನು ಪರಿಚಯಿಸುವ   ಪ್ರಯತ್ನವೇ ಆಟಿ ಆಚರಣೆಯ  ಸಂದೇಶವಾಗಿದೆ ಎಂದರು.                                 

ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ಸೋನಿಯಾ ವರ್ಮ ಅವರು ವಿಪರೀತ ಮಳೆ ಸುರಿಯುವ ಬೇಸಾಯದ  ನಾಟಿ ಸಂದರ್ಭದಲ್ಲಿ   ಸುತ್ತುಮುತ್ತಲಿನ ಪ್ರಕೃತಿಜನ್ಯ ಸಸ್ಯ, ಸೊಪ್ಪು,ತರಕಾರಿ ಯ ಪದಾರ್ಥ ಸೇವನೆ ಔಷಧೀಯ ಗುಣ ಹೊಂದಿದೆ. ಪರಂಪರೆಯ ಪಾಕವೈವಿಧ್ಯದ  ಅರಿವು   ಮುಂದಿನ ಪೀಳಿಗೆಗೆ  ಅಗತ್ಯವಿದೆ.  ಹಲಸು,ಮಾವು, ಉಪ್ಪಿನಲ್ಲಿ ಹಾಕಿದ  ಹಲಸಿನ  ಕಾಯಿ,ಹಲಸಿನ ಬೀಜ  ಶರೀರದ ಆರೋಗ್ಯಕ್ಕೆ ಒಳ್ಳೆಯದೆಂದು ಹಿರಿಯರ ಅನುಭವ.   ಆಟಿ ಅಮಾವಾಸ್ಯೆಯಂದು ಹಾಲೆ ಕಷಾಯ ಕುಡಿದು  ಉಷ್ಣಕ್ಕೆ ಮೆಂತೆ ಗಂಜಿ  ಸೇವನೆ   ಹಿರಿಯರಿಂದ ನಡೆದುಬಂದಿದೆ.  ಮಕ್ಕಳಿಗೆ ಚಿಕ್ಕಂದಿನಲ್ಲೇ  ಆಟಿ ತಿಂಗಳ ವಿಶೇಷ  ಆಹಾರದ ರುಚಿ ಬೆಳೆಸಿ  ಅರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು ಎಂದರು. ಸಮೀರ್ ಆಟಿ ತಿಂಗಳ ಮಹತ್ವ,  ಪ್ರಭಾವತಿ ಆಚರಣೆಯ  ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.                                                 

ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ  ಸಂದೇಶ ರಾವ್, ಪೂರ್ವಾಧ್ಯಕ್ಷ ಅರುಣ ಕುಮಾರ್  ಎಂ. ಎಸ್ ,ಸದಸ್ಯ ಪ್ರಶಾಂತ್ ಜೈನ್ ,  ಎಸ್ ಡಿ.ಎಂ.ಕ್ರೀಡಾ ಸಂಘದ ನಿರ್ದೇಶಕ ರಮೇಶ್, ರತ್ನಮಾನಸದ  ರವಿಚಂದ್ರ  ಉಪಸ್ಥಿತರಿದ್ದರು.  ರತ್ನಮಾನಸದ ಪಾಲಕ ಯತೀಶ್ ಕುಮಾರ್ ಸ್ವಾಗತಿಸಿ,  ಎಸ್ ಡಿ.ಎಂ. ಡಿ.ಎಡ್ ಕಾಲೇಜು ಪ್ರಾಂಶುಪಾಲ  ಸ್ವಾಮಿ  ವಂದಿಸಿದರು. ಅನುಷಾ ಕಾರ್ಯಕ್ರಮ ನಿರೂಪಿಸಿದರು.  ಶ್ರೀ ಧ ಮಂ , ಶಿಕ್ಶಕರ  ತರಬೇತಿ  ಸಂಸ್ಥೆಯ  ವಿದ್ಯಾರ್ಥಿಗಳು, ರತ್ನಮಾನಸದ ವಿದ್ಯಾರ್ಥಿಗಳು ಭಾಗವಹಿಸಿದ್ದರು.   ಆಟಿದ ಅಟಿಲ್ ವಿಶೇಷ ಕಾರ್ಯಕ್ರಮದಲ್ಲಿ  25-3೦ ವಿಶೇಷ ಖಾದ್ಯಗಳನ್ನು  ತಯಾರಿಸಿ,ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya
error: Content is protected !!