September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

ಉಜಿರೆ: ತುಳುನಾಡಿನ ಪ್ರಾದೇಶಿಕ ವಿಶೇಷತೆಗಳಲ್ಲಿ ಆಟಿ ಆಚರಣೆಯೂ ಒಂದಾಗಿದೆ. ಪ್ರಕೃತಿಯ  ಸಸ್ಯಮೂಲಗಳು  ದೇಹದ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.  ಶರೀರದ ರೋಗ ರುಜಿನಗಳಿಗೆ  ಆಟಿ ಕಷಾಯದಂತಹ  ಔಷಧೀಯ  ಸೇವನೆ ವೈಜ್ಞಾನಿಕವಾಗಿಯೂ ಆರೋಗ್ಯವರ್ಧಕ . ಶರೀರಕ್ಕೆ ಅಂಟಿಕೊಂಡ ವ್ಯಾಧಿಗೆ ಮಾನಸಿಕ ಚೈತನ್ಯ  ನೀಡುವ  ಔಷಧೀಯ ಗುಣ  ಆಟಿ ಆಚರಣೆಯ  ಆಹಾರ ಸೇವನೆ, ಆಚರಣೆಯಲ್ಲಿದೆ. ಪರಂಪರೆಯ ಹಳ್ಳಿ ಸೊಗಡಿನ  ಹಿರಿಯರ ಜ್ಞಾನವನ್ನು ಮರೆಯದೆ  ನಮ್ಮ ಬದುಕನ್ನು ಆರೋಗ್ಯಪೂರ್ಣವಾಗಿ  ಉಳಿಸಿ ಮುಂದಿನ ಪೀಳಿಗೆಗೆ  ತಿಳಿಸಿ ಹೇಳಬೇಕಾಗಿದೆ ಎಂದು ಉಜಿರೆ ಎಸ್ ಡಿ.ಎಂ.ಕಾಲೇಜಿನ ಕನ್ನಡ ಉಪನ್ಯಾಸಕ ಡಾ!ದಿವ ಕೊಕ್ಕಡ ಹೇಳಿದರು.                                         

ಅವರು  ಆ.3  ರಂದು ಉಜಿರೆಯ ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ  ಶ್ರೀ ಧ .ಮಂ .ಶಿಕ್ಷಕರ ತರಬೇತಿ ಸಂಸ್ಥೆ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್  ಸಹಯೋಗದೊಂದಿಗೆ ನಡೆದ “ಆಟಿದ ಅಟಿಲ್”  ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಯಾಗಿ  ಆಟಿ ಆಚರಣೆಯ ಮಹತ್ವ ತಿಳಿಸಿದರು.  ತುಳುನಾಡಿನ ಪ್ರಾಚೀನ ಜೀವನ ಪದ್ಧತಿಯನ್ನು ನಾವು ಮರೆತಿದ್ದೇವೆ. ತುಳುವರು ವಿಶೇಷ ಜ್ಞಾನ ಸಂಪನ್ನರು.   ಆಟಿ ಅಮಾವಾಸ್ಯೆಯಂದು  ಹಾಲೆ  ಮರದ ತೊಗಟೆಯ  ಕಷಾಯ  ಸೇವನೆ   ವೈಜ್ಞಾನಿಕವಾಗಿಯೂ ನಂಜು ನಿವಾರಕ.   ಅಂದು ಕೃಷಿಯ ಗದ್ದೆಗೆ  ಕಾಪು ಇಡುವ ಪದ್ಧತಿ, ಮರಕೆಸುವಿನ ಪತ್ರೊಡೆ ಸೇವನೆ, ಆಟಿ  ತೀರ್ಥ ಸ್ನಾನ, ಮಾರಿ ಓಡಿಸುವ ಆಟಿ ಕಳಂಜ ಮೊದಲಾದ ಪ್ರಾದೇಶಿಕ ಜಾನಪದೀಯ  ಆಚರಣೆಯ ಮಹತ್ವ ಅರಿತು  ಮುಂದಿನ ಪೀಳಿಗೆಗೆ ಅದನ್ನು ಪರಿಚಯಿಸುವ   ಪ್ರಯತ್ನವೇ ಆಟಿ ಆಚರಣೆಯ  ಸಂದೇಶವಾಗಿದೆ ಎಂದರು.                                 

ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ಸೋನಿಯಾ ವರ್ಮ ಅವರು ವಿಪರೀತ ಮಳೆ ಸುರಿಯುವ ಬೇಸಾಯದ  ನಾಟಿ ಸಂದರ್ಭದಲ್ಲಿ   ಸುತ್ತುಮುತ್ತಲಿನ ಪ್ರಕೃತಿಜನ್ಯ ಸಸ್ಯ, ಸೊಪ್ಪು,ತರಕಾರಿ ಯ ಪದಾರ್ಥ ಸೇವನೆ ಔಷಧೀಯ ಗುಣ ಹೊಂದಿದೆ. ಪರಂಪರೆಯ ಪಾಕವೈವಿಧ್ಯದ  ಅರಿವು   ಮುಂದಿನ ಪೀಳಿಗೆಗೆ  ಅಗತ್ಯವಿದೆ.  ಹಲಸು,ಮಾವು, ಉಪ್ಪಿನಲ್ಲಿ ಹಾಕಿದ  ಹಲಸಿನ  ಕಾಯಿ,ಹಲಸಿನ ಬೀಜ  ಶರೀರದ ಆರೋಗ್ಯಕ್ಕೆ ಒಳ್ಳೆಯದೆಂದು ಹಿರಿಯರ ಅನುಭವ.   ಆಟಿ ಅಮಾವಾಸ್ಯೆಯಂದು ಹಾಲೆ ಕಷಾಯ ಕುಡಿದು  ಉಷ್ಣಕ್ಕೆ ಮೆಂತೆ ಗಂಜಿ  ಸೇವನೆ   ಹಿರಿಯರಿಂದ ನಡೆದುಬಂದಿದೆ.  ಮಕ್ಕಳಿಗೆ ಚಿಕ್ಕಂದಿನಲ್ಲೇ  ಆಟಿ ತಿಂಗಳ ವಿಶೇಷ  ಆಹಾರದ ರುಚಿ ಬೆಳೆಸಿ  ಅರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು ಎಂದರು. ಸಮೀರ್ ಆಟಿ ತಿಂಗಳ ಮಹತ್ವ,  ಪ್ರಭಾವತಿ ಆಚರಣೆಯ  ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.                                                 

ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ  ಸಂದೇಶ ರಾವ್, ಪೂರ್ವಾಧ್ಯಕ್ಷ ಅರುಣ ಕುಮಾರ್  ಎಂ. ಎಸ್ ,ಸದಸ್ಯ ಪ್ರಶಾಂತ್ ಜೈನ್ ,  ಎಸ್ ಡಿ.ಎಂ.ಕ್ರೀಡಾ ಸಂಘದ ನಿರ್ದೇಶಕ ರಮೇಶ್, ರತ್ನಮಾನಸದ  ರವಿಚಂದ್ರ  ಉಪಸ್ಥಿತರಿದ್ದರು.  ರತ್ನಮಾನಸದ ಪಾಲಕ ಯತೀಶ್ ಕುಮಾರ್ ಸ್ವಾಗತಿಸಿ,  ಎಸ್ ಡಿ.ಎಂ. ಡಿ.ಎಡ್ ಕಾಲೇಜು ಪ್ರಾಂಶುಪಾಲ  ಸ್ವಾಮಿ  ವಂದಿಸಿದರು. ಅನುಷಾ ಕಾರ್ಯಕ್ರಮ ನಿರೂಪಿಸಿದರು.  ಶ್ರೀ ಧ ಮಂ , ಶಿಕ್ಶಕರ  ತರಬೇತಿ  ಸಂಸ್ಥೆಯ  ವಿದ್ಯಾರ್ಥಿಗಳು, ರತ್ನಮಾನಸದ ವಿದ್ಯಾರ್ಥಿಗಳು ಭಾಗವಹಿಸಿದ್ದರು.   ಆಟಿದ ಅಟಿಲ್ ವಿಶೇಷ ಕಾರ್ಯಕ್ರಮದಲ್ಲಿ  25-3೦ ವಿಶೇಷ ಖಾದ್ಯಗಳನ್ನು  ತಯಾರಿಸಿ,ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು.

Related posts

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!