22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

ಬೆಳ್ತಂಗಡಿ: ಉಸ್ಮಾನ್ ಗರ್ಡಾಡಿಯವರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಪ್ರಮುಖ ಅಗ್ನಿಶಾಮಕ (ಲೀಡಿಂಗ್ ಫೈರ್‌ಮ್ಯಾನ್) ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿಗೊಂಡಿರುತ್ತಾರೆ.


ಇವರು 2005 ರಲ್ಲಿ ನೇರ ನೇಮಕಾತಿ ಮೂಲಕ ಇಲಾಖೆಗೆ ಸೇರ್ಪಡೆಗೊಂಡಿದ್ದು, ಶಿವಮೊಗ್ಗದಲ್ಲಿ ಇಲಾಖಾ ತರಬೇತಿ ಪಡೆದ ಬಳಿಕ ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ವರ್ಷ ಬಂಟ್ವಾಳ ಅಗ್ನಿಶಾಮಕ ಠಾಣೆಗೆ ವರ್ಗಾವಣೆಗೊಂಡಿದ್ದು, ಇದೀಗ ಪದೋನ್ನತಿ ಹೊಂದಿ ಮತ್ತೆ ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಆಗಮಿಸಿರುತ್ತಾರೆ.

ಇವರು ಇಲಾಖೆಯಲ್ಲಿ ಸಲ್ಲಿಸಿದ ಸೇವೆಗಾಗಿ 2021ನೇ ಸಾಲಿನ ಮಾನ್ಯ ಮುಖ್ಯಮಂತ್ರಿಯವರ ಚಿನ್ನದ ಪದಕಕ್ಕೆ ಭಾಜನರಾಗಿದ್ದು, ಅಗ್ನಿಶಮನ ಹಾಗೂ ರಕ್ಷಣಾ ಕಾರ್ಯದಲ್ಲಿ ಸಹಕರಿಸುವುದರೊಂದಿಗೆ ಜನರಲ್ಲಿ ಅಗ್ನಿ ಅನಾಹುತಗಳ ಹಾಗೂ ಇತರ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿಯೂ ಕೆಲಸ ನಿರ್ವಹಿಸುತ್ತಾರೆ. ಸಾರ್ವಜನಿಕರೊಡನೆ ಉತ್ತಮ ಸಂಪರ್ಕ ಸಂವಹನ ಹೊಂದಿರುವ ಇವರು ತಾಲೂಕಿನ ಗರ್ಡಾಡಿ ಗ್ರಾಮದ ನಿವಾಸಿಯಾಗಿರುತ್ತಾರೆ.

Related posts

ಗರ್ಡಾಡಿಯಲ್ಲಿ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಲಾಯಿಲ: ಪಡ್ಲಾಡಿ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ

Suddi Udaya

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ಉಜಿರೆ : ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ

Suddi Udaya

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya
error: Content is protected !!