24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾಭಿವೃದ್ದಿ ವಿಭಾಗದ ವಿಸ್ತೃತ ಚಟುವಟಿಕೆಯ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕೇಂದ್ರ ಸರ್ಕಾರದ ಬಜೆಟ್ ಮೇಲಿನ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ ನಡೆಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾಭಿವೃದ್ದಿ ವಿಭಾಗದ ಮುಖ್ಯಸ್ಥ ಡಾ. ಗಣರಾಜ್. ಕೆ ಅವರು ಕೇಂದ್ರ ಬಜೆಟಿನ ಮುಖ್ಯಾಂಶಗಳ ಬಗ್ಗೆ ವಿಸ್ತೃತವಾಗಿ ತಿಳಿಸಿದರು.

ತೃತೀಯ ಬಿ.ಎ ವಿದ್ಯಾರ್ಥಿಗಳಾದ ಸಿಂಚನಾ ಭಾರತೀ , ಸಮೀರ್ ಹಾಗೂ ಶ್ರಾವ್ಯಾ ಅವರು ಬಜೆಟ್ ನಲ್ಲಿ ಪ್ರಸ್ತಾಪಿತ ಶೈಕ್ಷಣಿಕ , ಉದ್ಯೋಗ ಹಾಗೂ ಕೌಶಲ್ಯ , ತಂತ್ರಜ್ಞಾನ , ಉದ್ಯೋಗ , ಕೃಷಿ , ಕೈಗಾರಿಕೆ ಇತ್ಯಾದಿ ಪ್ರಮುಖ ಅಂಶಗಳ ಬಗ್ಗೆ ಬೆಳಕು ಚೆಲ್ಲಿದರು. ವಿದ್ಯಾರ್ಥಿಗಳಿಂದ ಚರ್ಚೆ ಕೂಡ ನಡೆಯಿತು.

ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ರಾ. ಸೇ ಯೋಜನೆಯ ಸಹ ಯೋಜನಾಧಿಕಾರಿ ಹಾಗೂ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಪದ್ಮಶ್ರೀ ರಕ್ಷಿತ್ ಅವರು ಸ್ವಾಗತಿಸಿ ನಿರೂಪಿಸಿದರು.

Related posts

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

Suddi Udaya
error: Content is protected !!