23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾಭಿವೃದ್ದಿ ವಿಭಾಗದ ವಿಸ್ತೃತ ಚಟುವಟಿಕೆಯ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕೇಂದ್ರ ಸರ್ಕಾರದ ಬಜೆಟ್ ಮೇಲಿನ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ ನಡೆಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾಭಿವೃದ್ದಿ ವಿಭಾಗದ ಮುಖ್ಯಸ್ಥ ಡಾ. ಗಣರಾಜ್. ಕೆ ಅವರು ಕೇಂದ್ರ ಬಜೆಟಿನ ಮುಖ್ಯಾಂಶಗಳ ಬಗ್ಗೆ ವಿಸ್ತೃತವಾಗಿ ತಿಳಿಸಿದರು.

ತೃತೀಯ ಬಿ.ಎ ವಿದ್ಯಾರ್ಥಿಗಳಾದ ಸಿಂಚನಾ ಭಾರತೀ , ಸಮೀರ್ ಹಾಗೂ ಶ್ರಾವ್ಯಾ ಅವರು ಬಜೆಟ್ ನಲ್ಲಿ ಪ್ರಸ್ತಾಪಿತ ಶೈಕ್ಷಣಿಕ , ಉದ್ಯೋಗ ಹಾಗೂ ಕೌಶಲ್ಯ , ತಂತ್ರಜ್ಞಾನ , ಉದ್ಯೋಗ , ಕೃಷಿ , ಕೈಗಾರಿಕೆ ಇತ್ಯಾದಿ ಪ್ರಮುಖ ಅಂಶಗಳ ಬಗ್ಗೆ ಬೆಳಕು ಚೆಲ್ಲಿದರು. ವಿದ್ಯಾರ್ಥಿಗಳಿಂದ ಚರ್ಚೆ ಕೂಡ ನಡೆಯಿತು.

ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ರಾ. ಸೇ ಯೋಜನೆಯ ಸಹ ಯೋಜನಾಧಿಕಾರಿ ಹಾಗೂ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಪದ್ಮಶ್ರೀ ರಕ್ಷಿತ್ ಅವರು ಸ್ವಾಗತಿಸಿ ನಿರೂಪಿಸಿದರು.

Related posts

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ ದೀಪ ಪ್ರಜ್ವಲಿಸಿ ಲೋಕಾರ್ಪಣೆ

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ. ಪ್ರಾ. ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
error: Content is protected !!